ಸಂಗ್ರಹ ಚಿತ್ರ 
ರಾಜ್ಯ

ಮೈಸೂರು, ಚಾಮರಾಜನಗರದಲ್ಲಿ ಆಮ್ಲಜನಕ ಸ್ಥಾವರ ಸ್ಥಾಪಿಸಲಿರುವ ಗೇಲ್ ಇಂಡಿಯಾ

ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಕೊರತೆ ನೀಗಿಸಲು ಗೇಲ್ ಇಂಡಿಯಾ ಲಿಮಿಟೆಡ್ ಕಂಪನಿ ಮೈಸೂರು ಮತ್ತು ಚಾಮರಾಜನಗರಗಳಲ್ಲಿ ಆಮ್ಲಜನಕ ಸ್ಥಾವರ ಸ್ಥಾಪಿಸಲಿದೆ.

ಮಂಗಳೂರು: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಕೊರತೆ ನೀಗಿಸಲು ಗೇಲ್ ಇಂಡಿಯಾ ಲಿಮಿಟೆಡ್ ಕಂಪನಿ ಮೈಸೂರು ಮತ್ತು ಚಾಮರಾಜನಗರಗಳಲ್ಲಿ ಆಮ್ಲಜನಕ ಸ್ಥಾವರ ಸ್ಥಾಪಿಸಲಿದೆ.

ಕೋವಿಡ್ -19 ರೋಗಿಗಳಿಗೆ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಲು ಮೈಸೂರು ಮತ್ತು ಚಾಮರಾಜನಗರದಲ್ಲಿ ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್ (ಪಿಎಸ್ಎ) ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಘೋಷಿಸಿದಂತೆ ದೇಶಾದ್ಯಂತ ಸ್ಥಾಪಿಸಲಿರುವ 551 ಪಿಎಸ್‌ಎಗಳಲ್ಲಿ ಇದು ಕೂಡ ಒಂದಾಗಲಿದೆ,

ಉತ್ತರ ಪ್ರದೇಶದಲ್ಲಿ ನಾಲ್ಕು, ಮಧ್ಯಪ್ರದೇಶದಲ್ಲಿ ಮೂರು, ಕರ್ನಾಟಕದಲ್ಲಿ ಎರಡು ಮತ್ತು ರಾಜಸ್ಥಾನದಲ್ಲಿ ಒಂದು ಸೇರಿದಂತೆ ಒಟ್ಟು 10 ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಲು ಕೇಂದ್ರ ಸರ್ಕಾರವು ಗೇಲ್ ಇಂಡಿಯಾ ಲಿಮಿಟೆಡ್‌ಗೆ ಸೂಚಿಸಿದೆ.

ದಕ್ಷಿಣ ವಿಭಾಗದ ಬೆಂಗಳೂರು ಗೇಲ್ ಇಂಡಿಯಾ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಮುರುಗೇಶನ್ ಅವರು ಸೋಮವಾರ ಸೂಚನೆಯನ್ನು ಸ್ವೀಕರಿಸಿದ್ದಾರೆ. ಕೋವಿಡ್ ಪ್ರಕರಣಗಳ ಹೆಚ್ಚಳದೊಂದಿಗೆ ಆಮ್ಲಜನಕದ ಅವಶ್ಯಕತೆ ಹೆಚ್ಚಾದ ಕಾರಣ  ಕೆಲಸ ತ್ವರಿತವಾಗಿ ಪ್ರಾರಂಭವಾಗುತ್ತದೆ.

ಈ ಸ್ಥಳಗಳಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಬಹುಶಃ ಹೊಸ ಸೌಲಭ್ಯ ಬರಲಿದೆ, ಜೊತೆಗೆ ಸ್ಥಾವರಗಳ ನಿರ್ದಿಷ್ಟತೆ, ಅವುಗಳ ಸಾಮರ್ಥ್ಯ ಮತ್ತು ಇತರ ಅಂಶಗಳನ್ನು ರೂಪಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT