ಕಾವೇರಿ ನದಿ 
ರಾಜ್ಯ

ಕೋವಿಡ್ ಉಲ್ಬಣ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ

ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಕೋವಿಡ್‌ನಿಂದಾಗಿ ಸಾವುಗಳು ಹೆಚ್ಚಾಗುತ್ತಿದ್ದಂತೆ, ಶ್ರೀರಂಗಪಟ್ಟಣದ ಪ್ರಸಿದ್ಧ ಪಶ್ಚಿಮವಾಹಿನಿ ಮತ್ತಿತರೆಡೆಗಳಲ್ಲಿ ಮೃತರ ಚಿತಾಭಸ್ಮವನ್ನು ಬಿಡಲು ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿರುವುದನ್ನು ಗಮನಿಸಿ ಈ ಆದೇಶ ನೀಡಲಾಗಿದೆ.

ಕೋವಿಡ್ 19 ರ ಹರಡುವಿಕೆಯ ಬಗ್ಗೆ ಸ್ಥಳೀಯರು ಭಯ ವ್ಯಕ್ತಪಡಿಸಿದ್ದರಿಂದ ರಾಜ್ಯ ಮತ್ತು ನೆರೆ ಜಿಲ್ಲೆ, ನೆರೆ ರಾಜ್ಯಗಳ ಜನ ಕಾವೇರಿಯಲ್ಲಿ ಚಿತಾಭಸ್ಮವನ್ನು ಬಿಡುವುದಕ್ಕೆ ತಾಲ್ಲೂಕು ಆಡಳಿತವು ನಿಷೇಧ ಹೇರಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ತಹಶೀಲ್ದಾರ್ ಎಂ ವಿ ರೂಪಾ ತಿಳಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT