ಸಂಗ್ರಹ ಚಿತ್ರ 
ರಾಜ್ಯ

ಮೈಸೂರು: ಸೈಯದ್ ಇಸಾಕ್ ಗ್ರಂಥಾಲಯಕ್ಕೆ 8,000 ಪುಸ್ತಕ ದೇಣಿಗೆ

ಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯ ಬೆಂಕಿಗೆ ಆಹುತಿಯಾಗಿರುವುದರಿಂದ, ಅದರ ಮರು ಸ್ಥಾಪನೆಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 8,243 ಪುಸ್ತಕಗಳನ್ನು ದಾನ ರೂಪದಲ್ಲಿ ನೀಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯ ಬೆಂಕಿಗೆ ಆಹುತಿಯಾಗಿರುವುದರಿಂದ, ಅದರ ಮರು ಸ್ಥಾಪನೆಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 8,243 ಪುಸ್ತಕಗಳನ್ನು ದಾನ ರೂಪದಲ್ಲಿ ನೀಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

‘ಗ್ರಂಥಾಲಯ ಬೆಂಕಿಗೆ ಆಹುತಿಯಾದ ಸುದ್ದಿ ತಿಳಿದ ತಕ್ಷಣವೇ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಿಗೆ ಇಲಾಖೆಯಿಂದ ಪುಸ್ತಕಗಳನ್ನು ಒದಗಿಸಲು ಸೂಚಿಸಲಾಗಿತ್ತು. ಅಲ್ಲದೆ, ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ನೆರವು ಒದಗಿಸುವಂತೆ ಕೋಲ್ಕತ್ತದ ರಾಜಾರಾಂ ಮೋಹನರಾಯ್ ಗ್ರಂಥಾಲಯ ಪ್ರತಿಷ್ಠಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ನಡುವೆ ಗ್ರಂಥಾಲಯ ಮರು ನಿರ್ಮಾಣ ಕುರಿತು ಹೇಳಿಕೆ ನೀಡಿರುವ ಗ್ರಂಥಾಲಯ ಇಲಾಖೆಯ ಅಧಿಕಾರಿಗಳು, ಕೊರೋನಾ ಕರ್ಫ್ಯೂ ಹಿನ್ನೆಲೆಯಲ್ಲಿ ಮರುನಿರ್ಮಾಣ ಕಾರ್ಯವನ್ನು ಮುಂದೂಡಲಾಗಿದೆ. ಶೀಘ್ರದಲ್ಲೇ ಗ್ರಂಥಾಲಯ ಮರುನಿರ್ಮಾಣ ಮಾಡುವ ದಿನಾಂಕವನ್ನು ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel