ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸೋಂಕಿತರಿಗೆ ಐಸಿಯು ಬೆಡ್ ಕೊಡಿಸುವುದಾಗಿ ವಂಚಿಸುತ್ತಿದ್ದವನ ಬಂಧನ

ಕೋವಿಡ್ -19 ಸೋಂಕಿತರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಐಸಿಯು ಬೆಡ್‌ ಕೊಡಿಸುವುದಾಗಿ ಹೇಳಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ  ಆರೋಪಿ ಓರ್ವನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕೋವಿಡ್ -19 ಸೋಂಕಿತರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಐಸಿಯು ಬೆಡ್‌ ಕೊಡಿಸುವುದಾಗಿ ಹೇಳಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ  ಆರೋಪಿ ಓರ್ವನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ  ಮನೀಶ್ ಬಂಧಿತ ಆರೋಪಿ.ಬಂಧಿತ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದು, ಮಲ್ಲೇಶ್ವರಂನಲ್ಲಿ ನೆಲೆಸಿದ್ದನು.ಇಲ್ಲಿ ಹೌಸ್ ಕೀಪಿಂಗ್ ಏಜೆನ್ಸಿ  ಆರಂಭಿಸಿದ್ದನು.ಐಸಿಯು ಬೆಡ್‌ ಕೊಡಿಸುವುದಾಗಿ ಹೇಳಿ  ಹಣ ಪಡೆದು ವಂಚಿಸಿದ್ದಾನೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಯೊಬ್ಬರು ಆತ ವಿರುದ್ಧ ದೂರು ನೀಡಿದ್ದರು.ದೂರಿನ್ವಯ ಆತನನ್ನು ಬಂಧಿಸಲಾಗಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನದಲ್ಲಿ  ಇರಿಸಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ತಿಳಿಸಿದರು.

ಬಂಧಿತ ಆರೋಪಿ ಕೊರೊನಾ ಸೋಂಕಿತರಿಗೆ ಐಸಿಯು ಬೆಡ್‌ ನೀಡಲಾಗುವುದು ಹೇಳಿ ತನ್ನ ಮೊಬೈಲ್‌ ಸಂಖ್ಯೆ ಸಹಿತ ಸಂದೇಶ ಹರಿಬಿಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಂದೇಶ ನಂಬಿದ್ದ ದೂರುದಾರ, ತಮ್ಮ ತಾಯಿಗೆ ಬೆಡ್‌ ಕೊಡಿಸುವಂತೆ ಕೋರಿ ಆರೋಪಿಯನ್ನು ಸಂಪರ್ಕಿಸಿದ್ದರು. 

ಈ ವೇಳೆ ಬೆಡ್‌ ಕೊಡಿಸಲು ಹಣ ಖರ್ಚಾಗುತ್ತದೆ ಎಂದು ನಂಬಿಸಿ ದೂರುದಾರರಿಂದ ಗೂಗಲ್ ಪೇ  ಮೂಲಕ 20,000 ರೂ. ಪಡೆದುಕೊಂಡಿದ್ದನು. ನಂತರ, ದೂರುದಾರರ ಮೊಬೈಲ್ ಸಂಖ್ಯೆ  ಬ್ಲಾಕ್‌ ಮಾಡಿ ನಾಪತ್ತೆಯಾಗಿದ್ದನು ಎಂದು ಅವರು ತಿಳಿಸಿದ್ದಾರೆ.

ದೂರುದಾರರ ತಂದೆ–ತಾಯಿ ಇಬ್ಬರಿಗೂ ಕೊರೊನಾ ಸೋಂಕು ತಗುಲಿತ್ತು. ತಾಯಿ ಆರೋಗ್ಯ  ಕ್ಲಿಷ್ಟಕರವಾಗಿದ್ದ ಪರಿಣಾಮ ಅವರಿಗಾಗಿ ಐಸಿಯು ಬೆಡ್‌ ಹುಡುಕುತ್ತಿದ್ದರು. ಆದರೆ, ಏ. 24ರಂದು  ತಾಯಿ ತೀರಿಕೊಂಡಿದ್ದಾರೆ. ನಂತರ ಮರುದಿನ ಅವರ ತಂದೆ ಸಹ ಮೃತಪಟ್ಟಿದ್ದರು. ಅವರಿಬ್ಬರ  ಅಂತ್ಯಕ್ರಿಯೆ ಪೂರ್ಣಗೊಳಿಸಿದ ಬಳಿಕವೇ ದೂರುದಾರ ಠಾಣೆಗೆ ಬಂದು ದೂರು ಸಲ್ಲಿಸಿದ್ದಾರೆ
ಎಂದು ಅವರು ಮಾಹಿತಿ ನೀಡಿದರು.

ಬೆಡ್‌ ಹಂಚಿಕೆ ಪ್ರಕ್ರಿಯೆ ಸಾಫ್ಟ್‌ವೇರ್‌ ಮೂಲಕ ನಡೆಯುತ್ತಿದ್ದು, ಯಾವುದೇ ಹಣ ನೀಡಬೇಕಾಗಿಲ್ಲ. ಐಸಿಯು ಬೆಡ್‌, ಆಕ್ಸಿಜನ್ ಸೇರಿ ಇತರೆ ಯಾವುದೇ ರೀತಿಯ ಸೇವೆ ಹೆಸರಿನಲ್ಲಿ ಯಾರಾದರೂ ಹಣಕ್ಕೆ ಬೇಡಿಕೆ ಇಟ್ಟರೆ ವಂಚನೆಗೆ ಒಳಗಾಗದೇ ಕೂಡಲೇ
 ಪೊಲೀಸ್‌ ಠಾಣೆಗೆ ಬಂದು ಮಾಹಿತಿ ನೀಡಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ  ಮಾಡಿದ್ದಾರೆ‌.                

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT