ಬೆಂಗಳೂರು ನಗರದಲ್ಲಿ ಕೊರೋನಾ ಪಾಸಿಟಿವ್ ಏರಿಕೆ 
ರಾಜ್ಯ

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಬೆಂಗಳೂರು ನಗರದಲ್ಲಿಯೇ ಅಧಿಕ: ಪಾಸಿಟಿವ್ ಪ್ರಮಾಣ ಶೇ.12ಕ್ಕೆ ಏರಿಕೆ

ರಾಜ್ಯದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವುದರ ಮಧ್ಯೆ ಬೆಂಗಳೂರು ನಗರದಲ್ಲಿಯೇ ಕೊರೋನಾ ಕೇಸುಗಳು ಹೆಚ್ಚಿದ್ದು ಏಪ್ರಿಲ್ ತಿಂಗಳಲ್ಲಿ ಪಾಸಿಟಿವ್ ಪ್ರಕರಣಗಳು ನಗರದಲ್ಲಿ ಶೇಕಡಾ 12ಕ್ಕೆ ಹೆಚ್ಚಳವಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವುದರ ಮಧ್ಯೆ ಬೆಂಗಳೂರು ನಗರದಲ್ಲಿಯೇ ಕೊರೋನಾ ಕೇಸುಗಳು ಹೆಚ್ಚಿದ್ದು ಏಪ್ರಿಲ್ ತಿಂಗಳಲ್ಲಿ ಪಾಸಿಟಿವ್ ಪ್ರಕರಣಗಳು ನಗರದಲ್ಲಿ ಶೇಕಡಾ 12ಕ್ಕೆ ಹೆಚ್ಚಳವಾಗಿದೆ.

ಪಾಸಿಟಿವ್ ದರಗಳೆಂದರೆ ಪ್ರತಿ 100 ಪರೀಕ್ಷೆಗಳಿಗೆ ಪಾಸಿಟಿವ್ ರೋಗಿಗಳ ಸಂಖ್ಯೆಯಾಗಿದೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 12.21ಕ್ಕೆ ತಲುಪಿತ್ತು. ನಂತರ ಇಳಿಮುಖವಾಗಿದ್ದ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಇದೀಗ ಏಪ್ರಿಲ್ ತಿಂಗಳಲ್ಲಿ ಮತ್ತಷ್ಟು ಹೆಚ್ಚಳವಾಗಿದೆ.

ಮೊನ್ನೆ ಮಂಗಳವಾರದ ಲೆಕ್ಕ ತೆಗೆದುಕೊಂಡರೆ ಬೆಂಗಳೂರು ನಗರದಲ್ಲಿ ಪಾಸಿಟಿವ್ ರೋಗಿಗಳ ಸಂಖ್ಯೆ ಶೇಕಡಾ 12ಕ್ಕೆ ತಲುಪಿದ್ದು 20 ಲಕ್ಷದ 82 ಸಾವಿರದ 897 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಕಳೆದ ತಿಂಗಳು ಬೆಂಗಳೂರು ನಗರದಲ್ಲಿ ಇದ್ದ ಸಂಖ್ಯೆ ಶೇಕಡಾ 2.31ರಷ್ಟಿದ್ದು 13 ಲಕ್ಷದ 78 ಸಾವಿರದ 753 ಪರೀಕ್ಷೆಗಳನ್ನು ಮಾಡಲಾಗಿತ್ತು.

ಫೆಬ್ರವರಿ, ಇದು ಶೇಕಡಾ 0.94 ರಷ್ಟಿದ್ದು, ಪರೀಕ್ಷೆಗೊಳಗಾದವರ ಸಂಖ್ಯೆ 7,27,314 ರಷ್ಟಾಗಿತ್ತು. ಜನವರಿ ತಿಂಗಳಲ್ಲಿ ಶೇಕಡಾ 0.91 ಮಂದಿ ಕೊರೋನಾ ಕೇಸುಗಳು  11 ಲಕ್ಷದ 29 ಸಾವಿರದ 909 ಮಂದಿ ಪರೀಕ್ಷೆಗೊಳಪಟ್ಟಿದ್ದರು. ಡಿಸೆಂಬರ್ ನಲ್ಲಿ ಶೇಕಡಾ 1.42ರಷ್ಟು ಸೋಂಕಿತರೊಂದಿಗೆ ಪರೀಕ್ಷೆ ಮಾಡಿಸಿಕೊಂಡವರ ಸಂಖ್ಯೆ 13 ಲಕ್ಷದ 8 ಸಾವಿರದ 060, ನವೆಂಬರ್ ನಲ್ಲಿ ಶೇಕಡಾ 2.19ರೊಂದಿಗೆ 14 ಲಕ್ಷದ 64 ಸಾವಿರದ 614 ಮಂದಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು.

ಅಕ್ಟೋಬರ್ ತಿಂಗಳಲ್ಲಿ ಶೇಕಡಾ 7.85ರಷ್ಟು ಕೊರೋನಾ ಸೋಂಕಿತರ ಸಂಖ್ಯೆಯಿದ್ದು 14 ಲಕ್ಷದ 64 ಸಾವಿರದ 614 ಪರೀಕ್ಷೆ ನಡೆಸಲಾಗಿತ್ತು. ಸೆಪ್ಟೆಂಬರ್ ತಿಂಗಳಲ್ಲಿ ಶೇಕಡಾ 12.21ರಷ್ಟಿದ್ದರೆ 8 ಲಕ್ಷದ 53 ಸಾವಿರದ 743 ಮಂದಿಗೆ ಪರೀಕ್ಷೆ ನಡೆಸಲಾಗಿತ್ತು. ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ವರದಿಯಾಗಿದ್ದು ಕಳೆದ ಜುಲೈಯಲ್ಲಿ ಅದು ಶೇಕಡಾ 23.8ರಷ್ಟು.

ಬೆಂಗಳೂರಿನಲ್ಲಿ ಶೇಕಡಾ 12ರಷ್ಟು ಎಂದರೆ ನಗರದಲ್ಲಿ ಕೊರೋನಾ ಸೋಂಕಿನ ಗುಣಲಕ್ಷಣಗಳನ್ನು ಹೊಂದಿರುವವರ ಪರೀಕ್ಷೆ ಮಾಡುವ ಸಾಮರ್ಥ್ಯ ಹೆಚ್ಚಾಗಿದೆ ಎಂದರ್ಥ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT