ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಕುಡಿದ ಅಮಲಿನಲ್ಲಿ ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿ!

ಕುಡಿದ ಅಮಲಿನಲ್ಲಿ ವ್ಯಕ್ತಿ ಓರ್ವ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರೂ ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಮೈಸೂರು: ಕುಡಿದ ಅಮಲಿನಲ್ಲಿ ವ್ಯಕ್ತಿ ಓರ್ವ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರೂ ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

ತಾಯಿ ಕೆಂಪನಂಜಮ್ಮ(60), ಗರ್ಭಿಣಿ ಪತ್ನಿ ಗಂಗಾ(28), ಪುತ್ರರಾದ ರೋಹಿತ್ (4) ಮತ್ತು ಸಾಮ್ರಾಟ್ (4) ಕೊಲೆಯಾದವರು. ಆರೋಪಿ ಮಣಿಕಂಠಸ್ವಾಮಿ ಮದ್ಯ ಸೇವಿಸಿ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮಣಿಕಂಠಸ್ವಾಮಿ ಕೊಲೆ ಮಾಡಿದ ಬಳಿಕ ಘಟನಾ ಸ್ಥಳದಿಂದ ತಲೆಮರೆಸಿಕೊಂಡಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪಿಎಸ್‍ಐ ದಿವ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಮೃತದೇಹಗಳು ಮ‌ನೆಯ ಒಳಗಿದ್ದು, ಆರೋಪಿಯನ್ನು ಬಂಧಿಸುವವರೆಗೂ ಮೃತದೇಹಗಳನ್ನು ಅಂತ್ಯಸಂಸ್ಕಾರಕ್ಕೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಮೃತ ಗಂಗಾ ಸಂಬಂಧಿಕರು ಪಟ್ಟುಹಿಡಿದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಶಾಂತಿಯೆಡೆಗೆ ಹೆಜ್ಜೆ ಮಾನವೀಯತೆಗೆ ಹೊಸ ಭರವಸೆ"- ಯುಕ್ರೇನ್-ರಷ್ಯಾ ಯುದ್ಧ ಕೊನೆಗೊಳಿಸಲು Putin ಗೆ Modi ಒತ್ತಾಯ

ಅಮಿತ್ ಶಾ ಅಧ್ಯಕ್ಷತೆಯಲ್ಲಿ ಬಿಹಾರ-ಜಾರ್ಖಂಡ್ ನಡುವಿನ 25 ವರ್ಷಗಳ ಹಳೆಯ ನದಿ ನೀರು ಹಂಚಿಕೆ ವಿವಾದ ಇತ್ಯರ್ಥ!

ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ಹಠಾತ್ ನಿವೃತ್ತಿ ಘೋಷಿಸಿದ ಲಿಯೋನೆಲ್ ಮೆಸ್ಸಿ

ಇರಾನ್ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ರಷ್ಟು ಬೆಳವಣಿಗೆ: ಪ್ರಧಾನಿ ಮೋದಿ ಮೆಚ್ಚುಗೆ!

'ಮೋದಿ ನನ್ನ ಜೀವನ ನರಕ ಮಾಡಿದ್ದಾರೆ, ಹೇಡಿ': ಕಣ್ಣೀರಿಟ್ಟು ಪ್ರಧಾನಿ ಕ್ಷಮೆ ಕೇಳಿದ್ದ ಹುಡುಗಿ ಯೂಟರ್ನ್; ಮತ್ತೊಂದು ವಿಡಿಯೋ!