ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಕುಡಿದ ಅಮಲಿನಲ್ಲಿ ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿ!

ಕುಡಿದ ಅಮಲಿನಲ್ಲಿ ವ್ಯಕ್ತಿ ಓರ್ವ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರೂ ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಮೈಸೂರು: ಕುಡಿದ ಅಮಲಿನಲ್ಲಿ ವ್ಯಕ್ತಿ ಓರ್ವ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರೂ ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

ತಾಯಿ ಕೆಂಪನಂಜಮ್ಮ(60), ಗರ್ಭಿಣಿ ಪತ್ನಿ ಗಂಗಾ(28), ಪುತ್ರರಾದ ರೋಹಿತ್ (4) ಮತ್ತು ಸಾಮ್ರಾಟ್ (4) ಕೊಲೆಯಾದವರು. ಆರೋಪಿ ಮಣಿಕಂಠಸ್ವಾಮಿ ಮದ್ಯ ಸೇವಿಸಿ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮಣಿಕಂಠಸ್ವಾಮಿ ಕೊಲೆ ಮಾಡಿದ ಬಳಿಕ ಘಟನಾ ಸ್ಥಳದಿಂದ ತಲೆಮರೆಸಿಕೊಂಡಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪಿಎಸ್‍ಐ ದಿವ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಮೃತದೇಹಗಳು ಮ‌ನೆಯ ಒಳಗಿದ್ದು, ಆರೋಪಿಯನ್ನು ಬಂಧಿಸುವವರೆಗೂ ಮೃತದೇಹಗಳನ್ನು ಅಂತ್ಯಸಂಸ್ಕಾರಕ್ಕೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಮೃತ ಗಂಗಾ ಸಂಬಂಧಿಕರು ಪಟ್ಟುಹಿಡಿದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ: ಉಪಸಭಾಪತಿ ಎಂ.ಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು; ಗಾಯತ್ರಿ ಶಾಂತೇಗೌಡ ಮೇಲುಗೈ!

'ಪ್ರತಿಯೊಬ್ಬ ನಾಗರಿಕನ ಜೀವ ಅಮೂಲ್ಯ'; Sonam Wangchuk ಆರೋಗ್ಯದ ಮೇಲೆ ಪ್ರತಿದಿನ ನಿಗಾ ವಹಿಸಿ: Delhi High court ಆದೇಶ

Hormuz ಉದ್ವಿಗ್ನತೆ ಮತ್ತಷ್ಟು ತೀವ್ರ: Iran ಮೇಲೆ ಅಮೆರಿಕ ಭೀಕರ ವೈಮಾನಿಕ ದಾಳಿ; ಟೆಹ್ರಾನ್ ಪ್ರತೀಕಾರ, ಬಹ್ರೇನ್-ಕುವೈತ್ ಗುರಿಯಾಗಿಸಿ ಕ್ಷಿಪಣಿಗಳ ಸುರಿ ಮಳೆ..!

'ನಾವು ತಪ್ಪು ಮಾಡಿದೆವು...': Epstein ಬಿಡುಗಡೆ ಎಡವಟ್ಟು ಒಪ್ಪಿಕೊಂಡ ಅಮೆರಿಕ ಉಪಾಧ್ಯಕ್ಷ JD Vance, Trump ಆಡಳಿತಕ್ಕೆ ತೀವ್ರ ಮುಜುಗರ..!

'ಅವರಿಗೆ ಕಥೆ ಗೊತ್ತಿದೆ, ಎಚ್ಚರಿಕೆಯಿಂದ ವರ್ತಿಸಲಿ': Iranಗೆ Trump ಕಠಿಣ ಎಚ್ಚರಿಕೆ, ಗಡುವು ನೀಡದೆ ಸೇನಾ ಕಾರ್ಯಾಚರಣೆಗೆ ಅಮೆರಿಕಾ ಮುಂದು..!