ಸಚಿವ ಸೋಮಣ್ಣ 
ರಾಜ್ಯ

ಕೋವಿಡ್-19: ಬೆಂಗಳೂರು ಪೂರ್ವ ವಲಯದಲ್ಲಿ ಹೆಚ್ಚೆಚ್ಚು ಹಾಸಿಗೆ, ಕೋವಿಡ್ ಕೇರ್ ಕೇಂದ್ರ ಸ್ಥಾಪನೆ- ಸಚಿವ ಸೋಮಣ್ಣ

ಬೆಂಗಳೂರು ಪೂರ್ವ ವಲಯದಲ್ಲಿ ಹೆಚ್ಚೆಚ್ಚು ಹಾಸಿಗೆಗಳ ಸ್ಥಾಪನೆ ಹಾಗೂ ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವ ಸೋಮಣ್ಣ ಅವರು ಹೇಳಿದ್ದಾರೆ. 

ಬೆಂಗಳೂರು: ಬೆಂಗಳೂರು ಪೂರ್ವ ವಲಯದಲ್ಲಿ ಹೆಚ್ಚೆಚ್ಚು ಹಾಸಿಗೆಗಳ ಸ್ಥಾಪನೆ ಹಾಗೂ ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವ ಸೋಮಣ್ಣ ಅವರು ಹೇಳಿದ್ದಾರೆ. 

ಬಿಬಿಎಂಪಿ ಪೂರ್ವ ವಲಯದ ಏಳು ಕ್ಷೇತ್ರಗಳ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸೋಮಣ್ಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ 2-3 ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಅಂಬೇಡ್ಕರ್ ಮೆಡಿಕಲ್ ಕಾಲೇಜನ್ನು ಸಂಪೂರ್ಣ ಕೋವಿಡ್ ಸೆಂಟರ್ ಮಾಡಲಿದ್ದೇವೆ. ಇಲ್ಲಿ 400 ಬೆಡ್​ಗಳಿವೆ. 150 ಆಕ್ಸಿಜನ್ ಬೆಡ್​ಗಳನ್ನ ಹಾಕುತ್ತಿದ್ದೇವೆ. ಪುಲಿಕೇಶಿ ಮತ್ತು ಸರ್ವಜ್ಞ ನಗರದಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಲಾಗುವುದು. ಚರಕ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಹಾಕಲಾಗುವುದು. ಚರಕ ಆಸ್ಪತ್ರೆಯ ಪಕ್ಕದಲ್ಲಿರುವ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ 100 ಬೆಡ್​ಗಳನ್ನ ನೀಡಲಾಗುವುದು. ಶಾಂತಿ ನಗರದಲ್ಲಿ 175 ಬೆಡ್​ಗಳ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು. ಸಿ.ವಿ. ರಾಮನ್ ನಗರದಲ್ಲಿ 100 ಬೆಡ್ ಹಾಗೂ ಇಂದಿರಾನಗರದಲ್ಲಿ 20-30 ಬೆಡ್​ಗಳಿರುವ ಕೋವಿಡ್ ಕೇಂದ್ರಗಳನ್ನ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. 

ಇಂದಿರಾನಗರ ಇಎಸ್ಐ ಆಸ್ಪತ್ರೆಯಲ್ಲಿ ಆಕ್ಸಿಜನ್ ವುಳ್ಳ 50 ಹಾಸಿಗೆಗಳನ್ನು ಸ್ಥಾಪನೆ ಮಾಡುವಂತೆ ಸೂಜಿಸಲಾಗಿದೆ. ವೆಂಟಿಲೇಟರ್, ಆಕ್ಸಿಜನ್ ಹಾಗೂ ರೆಮ್ಡೆಸಿವಿರ್ ಕುರಿತ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಲಾಗುತ್ತದೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ 20 ಜನರಿಗೆ ಆಕ್ಸಿಜನ್ ವ್ಯವಸ್ಥೆ ಮಾಡಲಾಗುತ್ತದೆ. ಗೋವಿಂದರಾಜನಗರದಲ್ಲಿ ಇಂದು ಸಂಜೆ ಆರಂಭಿಸುತ್ತೇವೆ. ಮೃತದೇಹ ಸಾಗಿಸಲು ವಾಹನ ವ್ಯವಸ್ಥೆ ಮಾಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಈ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT