ರಾಜ್ಯ

ಕೊರೋನಾ 3ನೇ ಅಲೆ ತಡೆಯಲು ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಸಿದ್ದರಾಮಯ್ಯ

Manjula VN

ಮೈಸೂರು: ಸಂಭಾವ್ಯ ಕೊರೋನಾ 3ನೇ ಅಲೆಯನ್ನು ಗಂಭೀರವಾಗಿ ಪರಿಗಣಿಸಿ, ಕ್ರಮಗಳ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಆಗ್ರಹಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಾಂಕ್ರಾಮಿಕ ರೋಗವನ್ನು ಒಬ್ಬ ವ್ಯಕ್ತಿ ನಿರ್ವಹಣೆ ಮಾಡುವುದು ಕಷ್ಟರವಾಗಲಿದೆ, ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶೀಘ್ರಗತಿಯಲ್ಲಿ ಸಂಪುಟ ರಚನೆ ಮಾಡಬೇಕೆಂದು ಹೇಳಿದ್ದಾರೆ. 

ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಈ ಎರಡೂ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಸರ್ಕಾರ ನಿರ್ಬಂಧ ಹೇರಬೇಕೆಂದು ಆಗ್ರಹಿಸಿದ್ದಾರೆ. 

ಇದೇ ವೇಳೆ ಕಳೆದ ವರ್ಷ ಪ್ರವಾಹ ಪೀಡಿತರಿಗೆ ಘೋಷಣೆ ಮಾಡಿದ್ದ ರೂ.10,000 ಪರಿಹಾರ ಹಣವನ್ನು ನೀಡದಿರುವುದಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

SCROLL FOR NEXT