ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಪೊಲೀಸರ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಅನುಮಾನಾಸ್ಪದವಾಗಿ

ಡ್ರಗ್ಸ್ ಮಾರಾಟದ ಆರೋಪದಡಿ‌ ವಶಕ್ಕೆ ಪಡೆಯಲಾಗಿದ್ದ ಆಫ್ರಿಕಾ ಪ್ರಜೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಬೆಂಗಳೂರು: ಡ್ರಗ್ಸ್ ಮಾರಾಟದ ಆರೋಪದಡಿ‌ ವಶಕ್ಕೆ ಪಡೆಯಲಾಗಿದ್ದ ಆಫ್ರಿಕಾ ಪ್ರಜೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿದೇಶಿ ಪ್ರಜೆಯೋರ್ವ ಜೆ.ಸಿ.ನಗರ ಪೊಲೀಸರ ವಶದಲ್ಲಿದ್ದರು. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ.

ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 5 ಗ್ರಾಂ ಎಂಡಿಎಂಎ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಎದೆನೋವು ಮತ್ತು ಶೀತ ಇದೆ ಎಂದು ಆಫ್ರಿಕಾ ಪ್ರಜೆ ಪೊಲೀಸರಿಗೆ ತಿಳಿಸಿದ್ದನು. ಹೀಗಾಗಿ ತಕ್ಷಣವೇ ಪೊಲೀಸರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.

ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರ ವಿಭಾಗದ ಡಿಸಿಪಿ‌ ಧರ್ಮೇಂದ್ರ ಕುಮಾರ್ ಮೀನಾ, 'ಆರೋಪಿಗೆ ಶೀತ‌ ಆಗಿತ್ತು. ತನಗೆ ಎದೆ ನೋವು ಆಗುತ್ತಿದೆ ಎಂದು ಆರೋಪಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಆತನನ್ನು ಶೀಘ್ರವೇ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಅಲ್ಲಿಯೇ‌ ಕೊನೆಯುಸಿರೆಳೆದಿದ್ದಾರೆ ಎಂದರು.

ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಆಫ್ರಿಕನ್ ಪ್ರಜೆಗಳು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೃತ ಆಫ್ರಿಕನ್ ಪ್ರಜೆಯನ್ನು ಬಂಧಿಸಿದ್ದ ಪೊಲೀಸರು ಸ್ಥಳಕ್ಕೆ ಬರುವಂತೆ ಅವರು ಪ್ರತಿಭಟನೆಯಲ್ಲಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT