ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ ಕೋವಿಡ್ 3ನೇ ಅಲೆಯಿಂದ ಕೂದಲೆಳೆ ಅಂತರದಲ್ಲಿದೆ: ಎಚ್ಚರಿಕೆ ನೀಡಿದ ತಜ್ಞರು

ರಾಜ್ಯದಲ್ಲಿ ಕೋವಿಡ್ ಸೋಂಕು ಉಲ್ಬಣಗೊಳ್ಳುತ್ತಿರುವ ಪ್ರಮಾಣ ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಯು 3ನೇ ಅಲೆಯ ಎಚ್ಚರಿಕೆಯನ್ನು ನೀಡುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಉಲ್ಬಣಗೊಳ್ಳುತ್ತಿರುವ ಪ್ರಮಾಣ ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಯು 3ನೇ ಅಲೆಯ ಎಚ್ಚರಿಕೆಯನ್ನು ನೀಡುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ರಾಜ್ಯದಲ್ಲಿ ಪ್ರಸ್ತುತ ಆರ್.ಮೌಲ್ಯ (ರಿಪ್ರೊಡೆಕ್ಟಿವ್ ನಂಬರ್) ಶೇ.0.85ರಷ್ಟಿದ್ದು, ಯಾವುದೇ ಸಮಯದಲ್ಲಿ ಈ ದರ ಶೇ.1ಕ್ಕೆ ತಲುಪುವ ಸಾಧ್ಯತೆಗಳಿವೆ. ಈ ರೀತಿಯಾಗಿದ್ದೇ ಆದರೆ, ಪರಿಸ್ಥಿತಿ ಕಠಿಣವಾಗಲಿದೆ ಎಂದು ಖ್ಯಾತ ಸಾಂಕ್ರಾಮಿಕ ರೋಗ ತಜ್ಞ ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಡಾ.ಗಿರಿಧರ ಬಾಬು ಅವರು ಹೇಳಿದ್ದಾರೆ. 

ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಕೋವಿಡ್ ಮೂರನೇ ಅಲೆ ಹಾಗೂ ರಾಜ್ಯದ ಪ್ರಸ್ತುತದ ಕೋವಿಡ್ ಪರಿಸ್ಥಿತಿ ಕುರಿತು ಮಾತನಾಡಿದ್ದಾರೆ. 

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇದು ಮೂರನೇ ಅಲೆಯ ಮುನ್ಸೂಚನೆಯೇ? 
ಸೋಂಕಿನ ಪ್ರವೃತ್ತಿಯನ್ನು ಪರಿಶೀಲಿಸಿದರೆ ಅದನ್ನು ನಿರ್ಣಯಿಸಲು ಹಲವಾರು ಮಾರ್ಗಗಳಿವೆ. ಆರ್.ಮೌಲ್ಯವನ್ನು ಪರಿಶೀಲಿಸುವುದಾದರೆ ಇದು ಜೂನ್ 20ರವರೆಗೆ ಕಡಿಮೆ ಪ್ರಮಾಣದಲ್ಲಿತ್ತು. ಬಳಿಕ ಹೆಚ್ಚಾಗತೊಡಗಿತ್ತು. ಪ್ರಸ್ತುತ ಈ ಮೌಲ್ಯ ಶೇ.0.85ರಷ್ಟಿದೆ. ಇದು ಯಾವುದೇ ಸಮಯದಲ್ಲಿ ಬೇಕಾದರೂ ಶೇ.1ಕ್ಕೆ ತಲುಪಬಹುದು. 3ನೇ ಅಲೆ ಕೂಡ ಎರಡನೇ ಅಲೆ ರೀತಿಯಲ್ಲಿಯೇ ಇರಲಿದೆ. ನಾವು ತೆಗೆದುಕೊಳ್ಳುವ ಕಠಿಣ ಕ್ರಮಗಳ ಮೇಲೆ ಸಾವು-ನೋವುಗಳು ಅವಲಂಬಿತವಾಗಿರುತ್ತವೆ. 

ನೆರೆ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿದ್ದರಿಂದ ರಾಜ್ಯದಲ್ಲಿಯೂ ಈ ಪರಿಸ್ಥಿತಿ ಎದುರಾಗಿದೆಯೇ ಅಥವಾ ರಾಜ್ಯದಲ್ಲಿಯೇ ಸೋಂಕು ಹೆಚ್ಚಾಗಿದೆಯೇ? 
ಹಲವಾರು ಅಂಶಗಳು ಇದಕ್ಕೆ ಕಾರಣವಾಗುತ್ತದೆ. ಸೆರೋಪ್ರೆವೆಲೆನ್ಸ್  (ಸೆರೋಲಾಜಿಕಲ್ ಪಾಸಿಟಿವ್ ಪರೀಕ್ಷಿಸಿದ ರೋಗಿಗಳ ಶೇಕಡಾವಾರು), ಲಸಿಕಾ ವ್ಯಾಪ್ತಿ ಮತ್ತು ಕೋವಿಡ್-ಸೂಕ್ತ ನಡವಳಿಕೆ ಇದಕ್ಕೆ ಪ್ರಮುಖವಾಗುತ್ತವೆ. ರಾಜ್ಯದಲ್ಲಿ ಸೋಂಕು ಹೆಚ್ಚಾಗಲು ನೆರೆ ರಾಜ್ಯ ಕೇರಳ ಮಾತ್ರವೇ ಕಾರಣವಲ್ಲ. ಸೋಂಕು ಎಲ್ಲಿಂದಾದರೂ ಪ್ರಪಂಚದ ಯಾವುದೇ ಭಾಗದಿಂದ ಬೇಕಾದರೂ ಬರಹುದು.  ಕರ್ನಾಟಕದ ಅನೇಕ ಪ್ರದೇಶಗಳಲ್ಲಿ ಕಡಿಮೆ ಸೆರೋಪ್ರೆವೆಲೆನ್ಸ್ ಇದೆ, ಇದು ಸೋಂಕು ಹಠಾತ್ ಉಲ್ಬಣಗೊಳ್ಳಲು ಕಾರಣವಾಗಬಹುದು. ಬೆಂಗಳೂರಿನಲ್ಲೂ ಕೂಡ ಸೆರೋಪ್ರೆವೆಲೆನ್ಸ್ ಕಡಿಮೆ ಇದೆ. ರಾಜ್ಯದ ಉತ್ತರ, ಕರಾವಳಿ ಭಾಗಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ನಾವು ಏಕರೂಪದ ನಿಯಮಗಳನ್ನು ಜಾರಿಗೆ ತರುವುದು ಅಗತ್ಯವಿದೆ. ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವುದು, ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಮಾಡುವುದರಿಂದ 3ನೇ ಅಲೆಯನ್ನು ತಡೆಯಬಹುದಾಗಿದೆ.

ಲಸಿಕೆ ಕುರಿತಂತೆ ಪ್ರಸ್ತುತ ರಾಜ್ಯದ ಸ್ಥಿತಿಗತಿ ಹೇಗಿದೆ? 
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಲಸಿಕೆಗಳ ಸಮರ್ಪಕ ಪೂರೈಕೆಯಿಲ್ಲ. ಹೀಗಾಗಿ ಲಸಿಕೆಗಳಿಗೆ ಕಾಯುತ್ತಿರುವ ಸಮಯದಲ್ಲೇ ನಾವು ಸೂಕ್ಷ್ಮ ಯೋಜನೆಗಳನ್ನು ರೂಪಿಸಬೇಕಿದೆ. ಫಲಾನುಭವಿಗಳ ಒಂದೆಡೆ ಸೇರಿದ ಕೋವಿನ್ ಆ್ಯಪ್ ನಲ್ಲಿ ಹೆಸರುಗಳನ್ನು ನೊಂದಾಯಿಸುವ ಕೆಲಸ ಮಾಡಬೇಕು. ಲಸಿಕೆ ಲಭ್ಯವಾದ ಕೂಡಲೇ ಫಲಾನುಭವಿಗಳು ಲಸಿಕೆ ಪಡೆಯುವಂತೆ ಮಾಡಬೇಕು. ಚುನಾವಣಾ ಸಂದರ್ಭದಲ್ಲಿ ಈ ರೀತಿ ಮಾಡಲಾಗಿತ್ತು. 

ಲಸಿಕೆ ಹಿಂಜರಿಕೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು?
ಲಸಿಕೆ ಹಿಂಜರಿಕೆಯು ಒಂದು ಅನುಕೂಲಕರ ಪದವಾಗಿದ್ದು, ಇದನ್ನು ಅರಿವಿನ ಕೊರತೆ, ಸೂಕ್ಷ್ಮ ಯೋಜನೆಯ ಕೊರತೆ, ಸಜ್ಜುಗೊಳಿಸುವಿಕೆಯ ಕೊರತೆ ಮುಂತಾದ ಹಲವಾರು ವೈಫಲ್ಯಗಳಿಗೂ ಬಳಸಲಾಗುತ್ತದೆ. ಭಯದಿಂದ ಅಥವಾ ಇನ್ನಾವುದೇ ಕಾರಣದಿಂದ ಲಸಿಕೆ ಹಾಕಲು ಇಚ್ಛಿಸದ ಜನರು ಬಹಳ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಇದು ಅತ್ಯಂತ ಪಾಶ್ಚಾತ್ಯ ವಿದ್ಯಮಾನವಾಗಿದೆ ಮತ್ತು ಭಾರತದಲ್ಲಿ ಲಸಿಕೆಗಳ ಕುರಿತಾದ ಪುರಾಣಗಳು ಅಥವಾ ಸುಳ್ಳು ಸುದ್ದಿಗಳ ಕಾರಣದಿಂದ ಕೆಲವೇ ಜನರು ಭಯಭೀತರಾಗಿದ್ದಾರೆ. ಇದರಿಂದ ಹೊರಬರಲು ಯುನಿಸೆಫ್, ಸರ್ಕಾರ ಮತ್ತು ಡಬ್ಲ್ಯುಎಚ್‌ಒ ಅಭಿಯಾನಗಳನ್ನು ನಡೆಸುತ್ತಿದೆ.

ಐಸಿಎಂಆರ್‌ಗೆ ಸಲ್ಲಿಸಿದ ಸೆರೋಪ್ರೆವೆಲೆನ್ಸ್ ಸಮೀಕ್ಷೆಯ ವರದಿಯು ರಾಜ್ಯದಲ್ಲಿ ಸುಮಾರು 68 ಪ್ರತಿಶತ ಸಿರೊಪೊಸಿಟಿವಿಟಿಯನ್ನು ತೋರಿಸುತ್ತದೆ...?
ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸೆರೋ ಸಮೀಕ್ಷೆಯಲ್ಲಿ ನಾನು ಭಾಗಿಯಾಗಿದ್ದೇನೆ. ಇಡೀ ರಾಜ್ಯಕ್ಕೆ ಎರಡು ಜಿಲ್ಲೆಗಳ ಫಲಿತಾಂಶಗಳ ಆಧಾರದ ಮೇಲೆ ಸರಾಸರಿ 68 ಪ್ರತಿಶತವನ್ನು ತೆಗೆದುಕೊಳ್ಳುವುದು ಸೂಕ್ತವಲ್ಲ. ಮುಂಬರುವ ದಿನಗಳಲ್ಲಿ, 30-40 ಪ್ರತಿಶತಕ್ಕಿಂತ ಕಡಿಮೆ ಸೆರೋಪ್ರೆವೆಲೆನ್ಸ್ ಇರುವ ಪ್ರದೇಶಗಳು ನೋಡುವ ವಿಶ್ವಾಸನನಗಿದೆ. 

ಸರ್ಕಾರ ತೆಗೆದುಕೊಳ್ಳಬೇಕಿರುವ ತಕ್ಷಣದ ಕ್ರಮಗಳೇನು?
ಒಂದು ಘಟನೆ ಬಳಿಕ ಮುಂದಿನದ್ದಕ್ಕೆ ಸಿದ್ಧರಾಗಲು ಕೋವಿಡ್ ವಿರುದ್ಧದ ಹೋರಾಟ ಚುನಾವಣೆಯಂತಲ್ಲ. ಇದು ಒಂದು ಪ್ರಕ್ರಿಯೆಯಾಗಿದ್ದು. ಸದಾಕಾಲ ಎಚ್ಚರಿಕೆ ಹಾಗೂ ಸಿದ್ಧರಾಗಿರಬೇಕು. ಕರ್ನಾಟಕವು ಉತ್ತಮ ಪರೀಕ್ಷಾ ದಾಖಲೆಯನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ, ಆದರೆ, ಈ ಸಂಖ್ಯೆ ಸಾಕಾಗುವುದಿಲ್ಲ. ಬೆಂಗಳೂರು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಪರೀಕ್ಷೆ ನಡೆಯುತ್ತದೆ. ಆದರೆ ಕಡಿಮೆ ಸೆರೋಪ್ರೆವೆಲೆನ್ಸ್ ಹೊಂದಿರುವ ಗ್ರಾಮೀಣ ಪ್ರದೇಶಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕಿದೆ. 

ರಾಜಕೀಯ ನಾಯಕರು, ನಟ-ನಟಿಯರು, ಇತರೆ ಕಲಾವಿದರು, ಧಾರ್ಮಿಕ ನಾಯಕರು ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ದೊಡ್ಡ ಮಟ್ಟದ ಜನಸಂಖ್ಯೆ ಸೇರದಂತೆ ನೋಡಿಕೊಳ್ಳುವುದು ಅತ್ಯಂತ ಮುಖ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT