ರಾಜ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯದರ್ಶಿಯಾಗಿ ವಿ ಪೊನ್ನುರಾಜ್ ನೇಮಕ

Srinivasamurthy VN

ಬೆಂಗಳೂರು:  ವಿ.ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ.ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿದ್ದ ಡಾ.ಎಸ್.ಸೆಲ್ವಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. 

ಅವರಿಂದ ತೆರವಾದ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ ಪೊನ್ನುರಾಜ್ ವರ್ಗಾಯಿಸಿದ್ದು, ಕೆಪಿಸಿಎಲ್ ವ್ಯವಸ್ಥಾಪಕ ಹುದ್ದೆಯಲ್ಲಿ ಮುಂದಿನ ಆದೇಶದವರೆಗೆ ಮುಂದುವರೆಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಸೆಲ್ವಕುಮಾರ್ ಅವರನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ  ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

SCROLL FOR NEXT