ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ 
ರಾಜ್ಯ

ಕೊರೋನಾ ಹೆಚ್ಚಳ: ದಕ್ಷಿಣ ಕನ್ನಡದಲ್ಲಿ ಹೊಸ ನಿರ್ಬಂಧಗಳು, ವಾರಾಂತ್ಯದಲ್ಲಿ ದೇವಾಲಯಗಳಿಗೆ ಪ್ರವೇಶ ಇಲ್ಲ

ಕೋವಿಡ್ -19 ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಆಗಸ್ಟ್ 15 ರವರೆಗೆ ಜಿಲ್ಲೆಯ ದೇವಸ್ಥಾನಗಳಿಗೆ ಹೊಸ ನಿರ್ಬಂಧಗಳನ್ನು ಜಾರಿ ಮಾಡಿದೆ.

ಮಂಗಳೂರು: ಕೋವಿಡ್ -19 ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಆಗಸ್ಟ್ 15 ರವರೆಗೆ ಜಿಲ್ಲೆಯ ದೇವಸ್ಥಾನಗಳಿಗೆ ಹೊಸ ನಿರ್ಬಂಧಗಳನ್ನು ಜಾರಿ ಮಾಡಿದೆ.

ಕಟೀಲು, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ತೆರೆದಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು ಬುಧವಾರ ತಮ್ಮ ಆದೇಶ ಹೊರಡಿಸಿದ್ದಾರೆ.

"ಭಕ್ತರು ಸಾಮಾಜಿಕ ಅಂತರ ಮತ್ತು ಇತರ ಮಾರ್ಗಸೂಚಿಗಳನ್ನು ಅನುಸರಿಸಬೇಕು. ತೀರ್ಥ, ಪ್ರಸಾದ ಮತ್ತು ಅನ್ನಸಂತರ್ಪಣ ಭಕ್ತರಿಗೆ ಲಭ್ಯವಿರುವುದಿಲ್ಲ. 

ಏತನ್ಮಧ್ಯೆ, ದೇವಸ್ಥಾನಗಳು ಶನಿವಾರ ಮತ್ತು ಭಾನುವಾರದಂದು ಸಂಪೂರ್ಣ ಬಂದ್ ಆಗಿರುತ್ತವೆ. ಅಲ್ಲದೆ, ವಾರಾಂತ್ಯದಲ್ಲಿ, ಭಕ್ತರು ಅತಿಥಿಗೃಹಗಳಲ್ಲಿ ಉಳಿಯಲು ಅಥವಾ ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ.

ಶನಿವಾರ ಮತ್ತು ಭಾನುವಾರ, ದೇವಾಲಯದ ಅರ್ಚಕರಿಗೆ ಮಾತ್ರ ದೈನಂದಿನ ಪೂಜೆ ಸಲ್ಲಿಸಲು ಅವಕಾಶವಿದೆ. "ವಾರಾಂತ್ಯಗಳನ್ನು ಹೊರತುಪಡಿಸಿ ಉಳಿದ ದಿನಗಳಳ್ಲಿ ಅತಿಥಿಗೃಹಗಳಲ್ಲಿ ಉಳಿಯಲು ಬಯಸುವ ಭಕ್ತರು 72 ಗಂಟೆಗೂ ಮುಂಚೆ ಪಡೆದ ನೆಗಟಿವ್ ಆರ್ ಟಿಪಿಸಿಆರ್ ವರದಿಯನ್ನು ಕಡ್ಡಾಯವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT