ಬಿಎಂ ಇದಿನಬ್ಬ ಪುತ್ರನ ನಿವಾಸ 
ರಾಜ್ಯ

ಮಂಗಳೂರು: ಐಎಸ್ಐಎಸ್ ನಂಟು ಶಂಕೆ; ಉಳ್ಳಾಲ ಮಾಜಿ ಶಾಸಕ ಬಿಎಂ ಇದಿನಬ್ಬ ಪುತ್ರನ ನಿವಾಸದ ಮೇಲೆ ಎನ್ಐಎ ದಾಳಿ

ಉಳ್ಳಾಲದ ಮಾಜಿ ಶಾಸಕ ಬಿಎಂ ಇದಿನಬ್ಬ ಪುತ್ರನ ನಿವಾಸದ ಮೇಲೆ ಆ.04 ರಂದು ಬೆಳ್ಳಂಬೆಳಿಗ್ಗೆ ಎನ್ಐಎ ದಾಳಿ ನಡೆದಿರುವುದು ಖಾಸಗಿ ಸುದ್ದಿ ಜಾಲತಾಣವೊಂದು ವರದಿಯಿಂದ ಬಹಿರಂಗಗೊಂಡಿದೆ. 

ಉಳ್ಳಾಲ: ಉಳ್ಳಾಲದ ಮಾಜಿ ಶಾಸಕ ಬಿಎಂ ಇದಿನಬ್ಬ ಪುತ್ರನ ನಿವಾಸದ ಮೇಲೆ ಆ.04 ರಂದು ಬೆಳ್ಳಂಬೆಳಿಗ್ಗೆ ಎನ್ಐಎ ದಾಳಿ ನಡೆದಿರುವುದು ಖಾಸಗಿ ಸುದ್ದಿ ಜಾಲತಾಣವೊಂದು ವರದಿಯಿಂದ ಬಹಿರಂಗಗೊಂಡಿದೆ. 

ಇದಿನಬ್ಬ ಅವರ ಪುತ್ರ ಬಿಎಂ ಬಾಷಾ ಈ ಮನೆಯಲ್ಲಿ ವಾಸವಿದ್ದು, ಕುಟುಂಬದವರಿಗೆ ಸಿರಿಯಾ ಮೂಲದ ಭಯೋತ್ಪಾದಕ ಸಂಘಟನೆ ಐಎಸ್ಐಎಸ್ ನಂಟಿರುವ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಮೂಲಗಳ ಪ್ರಕಾರ, ಕೇರಳದಲ್ಲಿದ್ದ ಬಾಷಾ ಅವರ ಪುತ್ರಿ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದು, ಐಎಸ್ಐಎಸ್ ಸೇರಿರುವ ಶಂಕೆ ವ್ಯಕ್ತವಾಗತೊಡಗಿದೆ. ಬಾಷಾ ಅವರು ಇಲ್ಲಿನ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಅವರ ಇಬ್ಬರು ಪುತ್ರರು ವಿದೇಶದಲ್ಲಿದ್ದಾರೆ. ಅವರ ಕುಟುಂಬ ಸದಸ್ಯರು ಐಎಸ್ಐಎಸ್ ಗೆ ಸಂಬಂಧಿಸಿದ ಯೂಟ್ಯೂಬ್ ಚಾನಲ್ ಗಳಿಗೆ ಚಂದಾದಾರರಾಗಿದ್ದರು. ಅಷ್ಟೇ ಅಲ್ಲದೇ ಉಗ್ರ ಸಂಘಟನೆ ಬಗ್ಗೆ ಮೃದು ಧೋರಣೆ ಹೊಂದಿದ್ದರು ಎಂಬ ಆರೋಪ ಕೇಳಿಬಂದಿದೆ. ಎನ್ಐಎ ನಿರ್ದೇಶಕ ಹಾಗೂ ಐಜಿ ಪೊಲೀಸ್ ಶ್ರೇಣಿಯ ಅಧಿಕಾರಿ ದಾಳಿಯ ನೇತೃತ್ವ ವಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT