ಸಾಂದರ್ಭಿಕ ಚಿತ್ರ 
ರಾಜ್ಯ

ಎರಡು ಪ್ರತ್ಯೇಕ ಆನೆ ದಾಳಿ ಪ್ರಕರಣ: ರೈತರಿಬ್ಬರ ಸಾವು

ಮಾಗಡಿ ಮತ್ತು ಕನಕಪುರ ತಾಲ್ಲೂಕುಗಳಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ.

ರಾಮನಗರ: ಮಾಗಡಿ ಮತ್ತು ಕನಕಪುರ ತಾಲ್ಲೂಕುಗಳಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ.

ಮೊದಲ ಘಟನೆಯಲ್ಲಿ ಮೃತನಾದ ವ್ಯಕ್ತಿಯನ್ನು ಮಾಗಡಿ ತಾಲ್ಲೂಕಿನ ಗಂಗಾಧರ್(45) ಎಂದು ಅರಣ್ಯ ಅಧಿಕಾರಿಗಳು ಗುರುತಿಸಿದ್ದಾರೆ.

ಗಂಗಾಧರ್ ಅವರು ಅಗಲಕೋಟೆ ಹ್ಯಾಂಡ್‌ಪೋಸ್ಟ್ ಬಳಿ ಆನೆಗೆ ಆಹಾರ ನೀಡಲು ಯತ್ನಿಸುತ್ತಿದ್ದಾಗ, ತುಳಿತಕ್ಕೊಳಗಾಗಿ ಅಸುನೀಗಿದ್ದಾರೆ.

ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ ರುದ್ರೇಗೌಡ ಎಂಬಾತನ ಜಮೀನಿಗೆ ನುಗ್ಗಿದ ಆನೆ ಆತನ ಮೇಲೆ ದಾಳಿ ನಡೆಸಿದಾಗ ಮೃತಪಟ್ಟಿದ್ದಾರೆ. 

ಅರಣ್ಯ ಅಧಿಕಾರಿಗಳು ಆನೆಗಳನ್ನು ಮರಳಿ ಕಾಡಿಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಆನೆ ದಾಳಿಯಿಂದ ಸುಮಾರು 12 ರೈತರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT