ಫೇಸ್ ಬುಕ್ 
ರಾಜ್ಯ

ಬೆಂಗಳೂರು: ಖಾಸಗಿ ವಿಡಿಯೋ ಬಹಿರಂಗಗೊಳಿಸುವ ಬೆದರಿಕೆಯೊಡ್ಡಿ ಹಣ ಪೀಕಿದ್ದ ಎಫ್ಬಿ ಸ್ನೇಹಿತೆ ವಿರುದ್ದ ಬಿಪಿಒ ಉದ್ಯೋಗಿ ದೂರು

ಫೇಸ್ ಬುಕ್ ಮೂಲಕ ಪರಿಚಯವಾಗಿ ನಂತರ ಖಾಸಗಿ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಬೆದರಿಸಿ 51 ಸಾವಿರ ರೂಪಾಯಿ ಹಣ ಪೀಕಿದ್ದ ಮಹಿಳೆ ವಿರುದ್ಧ 26 ವರ್ಷದ ಯುವಕನೋರ್ವ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. 

ಬೆಂಗಳೂರು: ಫೇಸ್ ಬುಕ್ ಮೂಲಕ ಪರಿಚಯವಾಗಿ ನಂತರ ಖಾಸಗಿ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಬೆದರಿಸಿ 51 ಸಾವಿರ ರೂಪಾಯಿ ಹಣ ಪೀಕಿದ್ದ ಮಹಿಳೆ ವಿರುದ್ಧ 26 ವರ್ಷದ ಯುವಕನೋರ್ವ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. 

ಮುನೇಕೊಳಲು ನಿವಾಸಿ ಕಿರಣ್ ಕುಮಾರ್(ಹೆಸರು ಬದಲಿಸಲಾಗಿದೆ) ದೂರಿನ ಆಧಾರದ ಮೇಲೆ ಆತನೊಂದಿಗೆ ಸ್ನೇಹ ಬೆಳೆಸಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಈ ವರ್ಷ ಮೇ ತಿಂಗಳಿನಿಂದ ಈ ಜೋಡಿ ಸಂಪರ್ಕದಲ್ಲಿದ್ದು, ಮೊಬೈಲ್ ಸಂಖ್ಯೆಗಳನ್ನು ಹಂಚಿಕೊಂಡಿದ್ದರು. ನಂತರ ಖಾಸಗಿಯಾಗಿ ಚಾಟ್ ಮಾಡಲು ಪ್ರಾರಂಭಿಸಿದರು. ನಂತರ ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚುವಂತೆ ಹೇಳಿದ ಮಹಿಳೆ ನಂತರ ಅವುಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಾಳೆ. 

ಈ ವಿಡಿಯೋಗಳನ್ನು ತೋರಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾಳೆ. ಅಲ್ಲದೆ ಹಣ ನೀಡದಿದ್ದರೆ ಈ ವಿಡಿಯೋಗಳನ್ನು  ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಮತ್ತು ಆತನ ಸ್ನೇಹಿತರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾಳೆ. 

ನಂತರ ಮಹಿಳೆಯ ಬ್ಯಾಂಕ್ ಖಾತೆಗೆ ಡಿಜಿಟಲ್ ಪಾವತಿಯ ಮೂಲಕ 51,000 ರೂ. ಹಾಕಿದ್ದಾನೆ. ಅಷ್ಟಕ್ಕೆ ನಿಲ್ಲದೆ ಇನ್ನಷ್ಟು ಹಣ ಕಳುಹಿಸುವಂತೆ ಬೆದರಿಕೆ ಹಾಕುತ್ತಿದ್ದರಿಂದ ಮನನೊಂದ ಯುವಕ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾನೆ. ಸದ್ಯ ಯುವಕನ ದೂರಿನನ್ವಯ ಹಣವನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎಂಬ ವಿವರಗಳನ್ನು ಆಧರಿಸಿ, ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದೇ ವರ್ಷದ ಮಾರ್ಚ್ ತಿಂಗಳಲ್ಲಿ ಕೆಆರ್ ಪುರಂನಲ್ಲಿ ವಾಸವಾಗಿದ್ದ 26 ವರ್ಷದ ಎಂಬಿಎ ಪದವೀಧರ ಇದೇ ರೀತಿಯ ಪ್ರಕರಣದಲ್ಲಿ ಸಿಲುಕಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದನು. ಈ ಪ್ರಕರಣ ಸಂಬಂಧ ವೈಟ್ ಫೀಲ್ಡ್ ಪೊಲೀಸರು ರಾಜಸ್ಥಾನದ ರಸೂಲ್ ಪುರ ಗ್ರಾಮದ ರಾಬಿನ್ ಭಾರತ್(22) ಮತ್ತು ಜಾವೇದ್ ರೆಹಮಾನ್ (25) ಅವರನ್ನು ಬಂಧಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT