ಐಎಂಎ ಪ್ರಕರಣದ ಆರೋಪಿ ಮನ್ಸೂರ್ ಅಲಿ ಖಾನ್ ಮತ್ತು ಜಮೀರ್ 
ರಾಜ್ಯ

ಐಟಿ ಅಲ್ಲ.. ಇಡಿ ದಾಳಿ: ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿಗಳಲ್ಲಿ ಮುಂದುವರೆದ ಜಾರಿನಿರ್ದೇಶನಾಲಯ ಅಧಿಕಾರಿಗಳ ಶೋಧ

ಕಾಂಗ್ರೆಸ್​ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಮತ್ತು ಕಚೇರಿಗಳ ಮೇಲೆ ನಡೆದಿರುವುದು ಐಟಿ ದಾಳಿ ಅಲ್ಲ.. ಇಡಿ ದಾಳಿ ಎಂದು ತಿಳಿದುಬಂದಿದೆ.

ಬೆಂಗಳೂರು: ಕಾಂಗ್ರೆಸ್​ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಮತ್ತು ಕಚೇರಿಗಳ ಮೇಲೆ ನಡೆದಿರುವುದು ಐಟಿ ದಾಳಿ ಅಲ್ಲ.. ಇಡಿ ದಾಳಿ ಎಂದು ತಿಳಿದುಬಂದಿದೆ.

ಜಮೀರ್ ಅವರ ಚಾಮರಾಜಪೇಟೆ ಮನೆ,  ಬಂಗಲೆ, ನ್ಯಾಷನಲ್ ಟ್ರಾವೆಲ್ಸ್​ ಸೇರಿದಂತೆ ಐದಾರು ಕಡೆಗಳಲ್ಲಿ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ಐಟಿ ದಾಳಿ ನಡೆಸಿದ್ದರು ಎನ್ನಲಾಗಿತ್ತು. ಆದರೆ ಅಧಿಕಾರಿಗಳು ಈಗ ನೀಡಿರುವ ಮಾಹಿತಿ ಪ್ರಕಾರ ಶಾಸಕ ಜಮೀರ್ ಅಹಮ್ಮದ್ ಮನೆ ಮೇಲೆ ನಡೆದಿರುವುದು  ಐಟಿ ದಾಳಿ ಅಲ್ಲ; ಅದು ಇ.ಡಿ. ದಾಳಿ. ಅದರೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯಿಂದ ಬಂದಿರುವ 45  ಇ.ಡಿ.  (ED) ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ವಸಂತನಗರದ ಜಮೀರ್ ಹಳೇ ನಿವಾಸ, ಬಂಬೂ ಬಜಾರ್ ನ ನಿವಾಸ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಜಮೀರ್ ಆಪ್ತನ ನಿವಾಸ ಹಾಗೂ ಜಮೀರ್ ಪಿ.ಎ ಮನೆ ಸೇರಿ 6 ಕಡೆ  ದಾಳಿ ನಡೆದಿದೆ. ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಇ.ಡಿ. ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ಮಾಡಲಾಗಿದೆ.

ಜಮೀರ್ ಗೆ ಕಂಟಕವಾಯಿತೇ ಐಎಂಎ ಪ್ರಕರಣ ಮತ್ತು ಮಗಳ ಅದ್ಧೂರಿ ಮದುವೆ?
ಇನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ ಹಿಂದೆ ಐಎಂಎ ಪ್ರಕರಣದ ನಂಟು ಕೇಳಿಬರುತ್ತಿದೆ. ಈ ಹಿಂದೆ ಐಎಂಎ ಅವ್ಯವಹಾರ ಪ್ರಕರಣದಲ್ಲಿ ಪ್ರಧಾನ ವಂಚಕ ಮನ್ಸೂರ್ ಶಾಸಕ ಜಮೀರ್ ಅಹ್ಮದ್ ಖಾನ್​ ಮತ್ತು ರೋಷನ್​ ಬೇಗ್​ ಅವರುಗಳ ಹೆಸರುಗಳನ್ನು ಪ್ರಸ್ತಾಪಿಸಿದ್ದ. ಹಾಗಾಗಿ ಇವರಿಬ್ಬರ ಮನೆಗಳು ಮೇಲೆ ​ಇಡಿ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಅಂತೆಯೇ ಶಾಸಕ ಜಮೀರ್ ಅಹಮದ್​ ಮಗಳ ಮದುವೆಗೆ ಹಣ, ಚಿನ್ನ ನೀಡಿದ್ದರ ಬಗ್ಗೆ ಮನ್ಸೂರ್ ಇಡಿ ಅಧಿಕಾರಿಗಳ ಎದುರು ಬಾಯ್ಬಿಟ್ಟಿದ್ದ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಜಮೀರ್ ಅಹ್ಮದ್ ಖಾನ್ ಕೂಡ ತಮ್ಮ ಮಗಳ ಮದುವೆಯನ್ನು ಅತ್ಯಂತ ವಿಜೃಂಭಣೆಯಿಂದ ಮಾಡಿದ್ದರು. ಇದೇ ವಿಚಾರವಾಗಿ ಶಾಸಕ ಜಮೀರ್ ಮನೆ ಮೇಲೆ ಈಗ ಇ.ಡಿ ದಾಳಿ ನಡೆದಿದೆ ಎನ್ನಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT