ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಮಕ್ಕಳ ಕಳ್ಳಸಾಗಣೆ ಮತ್ತು ಮಾರಾಟದಲ್ಲಿ ತೊಡಗಿದ್ದ ತಾಯಿ-ಮಗಳ ಬಂಧನ

ನಂಜನಗೂಡು ಮಕ್ಕಳ ಕಳ್ಳ ಸಾಗಣೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟೂ ಹೆಚ್ಚಿನ ಮಾಹಿತಿ ಪೊಲೀಸರಿಗೆ ಲಭ್ಯವಾಗುತ್ತಿದೆ. ಒಂದು ಪ್ರಕರಣದ ತನಿಖೆಗೆ ಇಳಿದ ಪೊಲೀಸರಿಗೆ ಮತ್ತೊಂದು ಪ್ರಕರಣದ ಜಾಡು ಸಿಕ್ಕಿದೆ.

ಮೈಸೂರು: ಮೈಸೂರು ಕಾನೂನುಬಾಹಿರ ಮಕ್ಕಳ ದತ್ತು ಮತ್ತು ಸಾಗಾಣಿಕೆ ದಂಧೆಗಳ ಕೇಂದ್ರವಾಗಿ ಪರಿವರ್ತನೆಯಾಗುತ್ತಿದೆ ಎಂದು ಸರ್ಕಾರೇತರ ಸಂಸ್ಥೆಗಳು ಮತ್ತು ಮಕ್ಕಳ ಹಕ್ಕುಗಳ ಕಾರ್ಯಕರ್ತರ ನಿರಂತರ ಎಚ್ಚರಿಕೆಗಳು ನಿಜವಾಗಿದ್ದು, ಮೈಸೂರು ಮತ್ತು ನಂಜನಗೂಡು ಪೊಲೀಸರು ಮಕ್ಕಳಿಲ್ಲದ ದಂಪತಿಗಳಿಗೆ ಮಗುವನ್ನು ಅಕ್ರಮವಾಗಿ ಮಾರಾಟ ಮಾಡುವುದನ್ನು ಪತ್ತೆ ಮಾಡಿದ್ದಾರೆ.

ಆತಂಕದ ಸಂಗತಿಯೆಂದರೆ, ಖಾಸಗಿ ಆಸ್ಪತ್ರೆಯೂ ಮಗುವನ್ನು ದತ್ತು ಪಡೆದ ದಂಪತಿಗಳನ್ನು ತನ್ನ ಜೈವಿಕ ಪೋಷಕರಾಗಿ ತೋರಿಸುವ ಸುಳ್ಳು ದಾಖಲೆಗಳನ್ನು ಸೃಷ್ಟಿಸುವಲ್ಲಿ ತೊಡಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂಜನಗೂಡು ಮಕ್ಕಳ ಕಳ್ಳ ಸಾಗಣೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟೂ ಹೆಚ್ಚಿನ ಮಾಹಿತಿ ಪೊಲೀಸರಿಗೆ ಲಭ್ಯವಾಗುತ್ತಿದೆ. ಒಂದು ಪ್ರಕರಣದ ತನಿಖೆಗೆ ಇಳಿದ ಪೊಲೀಸರಿಗೆ ಮತ್ತೊಂದು ಪ್ರಕರಣದ ಜಾಡು ಸಿಕ್ಕಿದೆ.

ಮಕ್ಕಳ ಮಾರಾಟ ಜಾಲ ಪ್ರಕರಣದ ತನಿಖೆಗೆ ಇಳಿದ ಪೊಲೀಸರಿಗೆ ಈಗಾಗಲೇ ಸಿಕ್ಕಿಬಿದ್ದಿರುವ ಶ್ರೀಮತಿ ಅಲಿಯಾಸ್ ಸರಸ್ವತಿ ನಾಡಿಗ್ ಹಾಗೂ ಮಗಳು ಲಕ್ಷ್ಮಿ ಮತ್ತೊಂದು ಮಗುವನ್ನೂ ಸಹ ಮಾರಾಟ ಮಾಡಿರುವುದನ್ನು ಬಾಯಿಬಿಟ್ಟಿದ್ದಾರೆ.

ಎರಡನೇ ಪ್ರಕರಣದ ಕುರಿತು ಮಾಹಿತಿ ನೀಡಿದ ಎಸ್‌ಪಿ ಆರ್.ಚೇತನ್, ನಂಜನಗೂಡು ಪಟ್ಟಣದ ಮಂಜುಳಾ ಎಂಬವರಿಗೆ ಸೇರಿದ 8 ತಿಂಗಳ ಮಗುವನ್ನು ಹಣಕ್ಕಾಗಿ ಕೊಳ್ಳೇಗಾಲದ ದಂಪತಿಗೆ ಮಾರಾಟ ಮಾಡಿದ್ದಾಗಿ ವಿಚಾರಣೆ ವೇಳೆ ಆರೋಪಿ ಶ್ರೀಮತಿ ಬಾಯ್ಬಿಟ್ಟಿದ್ದಾಳೆ. ಮಂಜುಳಾ ಗೃಹಿಣಿಯಾಗಿದ್ದು, ಪತಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದಾನೆ. ಬಡತನ ಹಿನ್ನೆಲೆಯಲ್ಲಿ ಮಗು ಮಾರಾಟದ ಜಾಲಕ್ಕೆ ಸಿಲುಕಿರುವ ಸಾಧ್ಯತೆಯಿದೆಯೆಂದು ತಿಳಿಸಿದರು.

ಎರಡೂ ಪ್ರಕರಣಗಳಲ್ಲಿಯೂ ಎನ್.ಆರ್.ಮೊಹಲ್ಲಾದ ಎಸ್‌ಎಲ್‌ಇಸಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳು ಜನಿಸಿರುವುದು ಪ್ರಕರಣದಲ್ಲಿ ಆಸ್ಪತ್ರೆಯ ಪಾತ್ರದ ಕುರಿತು ಸಂಶಯ ವ್ಯಕ್ತವಾಗಿದೆ.

ಜ್ಯೋತಿ ಎಂಬವರಿಂದ ಪಡೆದ ಮೊದಲ ಮಗುವನ್ನು ಹೊಳೆನರಸೀಪುರದ ದಂಪತಿಗೆ 4 ಲಕ್ಷ ರೂ.ಗೆ ಮಾರಾಟ ಮಾಡಿರುವ ಪ್ರಕರಣದ ತನಿಖೆ ಪ್ರಾರಂಭಿಕ ಹಂತದಲ್ಲಿದ್ದು, ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುವುದು. ಎರಡು ಪ್ರಕರಣಗಳಲ್ಲಿ 3 ಹಾಗೂ 8 ತಿಂಗಳ ಎರಡು ಶಿಶುಗಳನ್ನು ರಕ್ಷಿಸಿದ್ದು, ಮಕ್ಕಳ ಆರೈಕೆ ಕೇಂದ್ರದ ಸುಪರ್ದಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!