ಸೂತ್ರ ಬಿಡುಗಡೆ ಕಾರ್ಯಕ್ರಮ 
ರಾಜ್ಯ

ಗಣಿತ-ವಿಜ್ಞಾನ ಮಾಸ ಪತ್ರಿಕೆ "ಸೂತ್ರ" ಬಿಡುಗಡೆ

ವಿಜ್ಞಾನ ಹಾಗೂ ಗಣಿತ ವಿಷಯಗಳಿಗೆ ಸಂಬಂಧ ಕನ್ನಡದ 'ಸೂತ್ರ' ಮಾಸಪತ್ರಿಕೆಯನ್ನು ಆ.07 ರಂದು ನಗರದ ಖಾಸಗಿ ಹೊಟೇಲ್ ನಲ್ಲಿ ಬಿಡುಗಡೆ ಮಾಡಲಾಯಿತು.

ಬೆಂಗಳೂರು: ವಿಜ್ಞಾನ ಹಾಗೂ ಗಣಿತ ವಿಷಯಗಳಿಗೆ ಸಂಬಂಧ ಕನ್ನಡದ 'ಸೂತ್ರ' ಮಾಸಪತ್ರಿಕೆಯನ್ನು ಆ.07 ರಂದು ನಗರದ ಖಾಸಗಿ ಹೊಟೇಲ್ ನಲ್ಲಿ ಬಿಡುಗಡೆ ಮಾಡಲಾಯಿತು.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಪ್ರಯೋಗ ಶಿಕ್ಷಣ ಸಂಶೋಧನಾ ಸಂಸ್ಥೆಯ ಮುಖ್ಯಸ್ಥರಾದ ಡಾ.ಎಚ್ಎಸ್ ನಾಗರಾಜ, ಭೂವಿಜ್ಞಾನಿ ಡಾ.ಟಿ.ಆರ್ ಅನಂತರಾಮು, ಕನ್ನಡಪ್ರಭ.ಕಾಂನ ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ, ಪತ್ರಿಕೆಯ ಸಂಪಾದಕ, ರೋಹಿತ್ ಚಕ್ರತೀರ್ಥ, ಕಿರುತೆರೆ ನಿರ್ದೇಶಕರಾದ ಎನ್.ಎಸ್ ಸೇತುರಾಮ್ ಅವರು ಸೂತ್ರ ಮಾಸ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿದರು. 

ಕನ್ನಡದಲ್ಲಿ ಸರಳ ಶೈಲಿಯಲ್ಲಿ ವಿಜ್ಞಾನ-ಗಣಿತ ವಿಷಯಗಳನ್ನು ಜನತೆಗೆ ತಲುಪಿಸುವುದು ಈ ಪತ್ರಿಕೆಯ ಉದ್ದೇಶವಾಗಿದೆ. ಡಾ. ಟಿ.ಆರ್. ಅನಂತರಾಮು ವಿಜ್ಞಾನ ಪ್ರತಿಷ್ಠಾನ ಈ ಮಾಸಪತ್ರಿಕೆಯನ್ನು ಹೊರತಂದಿದ್ದು,  ಭೂವಿಜ್ಞಾನಿ, ಸಂಶೋಧಕ, ಅಂಕಣಕಾರ, ವಿಜ್ಞಾನ ಲೇಖಕರೂ ಆಗಿರುವ ಡಾ. ಟಿ.ಆರ್. ಅನಂತರಾಮು ಅವರ ಮಾರ್ಗದರ್ಶನ ಈ ಮಾಸಪತ್ರಿಕೆಗೆ ಇದೆ.

ವಿಜ್ಞಾನ-ಗಣಿತ ಕ್ಷೇತ್ರದ ಖ್ಯಾತ ಲೇಖಕ, ಅಂಕಣಕಾರ ರೋಹಿತ್ ಚಕ್ರತೀರ್ಥ ಸೂತ್ರ ಪತ್ರಿಕೆಯ ಸಂಪಾದಕ. ವಿದ್ಯಾರ್ಥಿಗಳಲ್ಲಿ, ವಿಜ್ಞಾನ ಮತ್ತು ಗಣಿತದ ಬಗ್ಗೆ ಆಸಕ್ತಿ ಮೂಡಿಸುವುದು ಪತ್ರಿಕೆಯ ಮುಖ್ಯ ಉದ್ದೇಶವಾಗಿದೆ. 
   
ಕನ್ನಡದಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ವಿಜ್ಞಾನ ಲೇಖಕ ಟಿ. ಆರ್. ಅನಂತರಾಮು ಅವರ ಹೆಸರಿನಲ್ಲಿ, ‘ಡಾ. ಟಿ.ಆರ್. ಅನಂತರಾಮು ವಿಜ್ಞಾನ ಪ್ರತಿಷ್ಠಾನವನ್ನು ಸ್ಥಾಪಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!