ಎನ್ಐಎ ಕೇಂದ್ರ ಕಚೇರಿ, ನವದೆಹಲಿ 
ರಾಜ್ಯ

ಬಾಂಗ್ಲಾದೇಶಿಗಳ ಮಾನವ ಕಳ್ಳಸಾಗಣೆ ಪ್ರಕರಣ: ಕರ್ನಾಟಕದಲ್ಲಿ ಎನ್ಐಎ ಶೋಧಕಾರ್ಯಾಚರಣೆ

ಮಾನವಕಳ್ಳಸಾಗಣೆಯಲ್ಲಿ ತೊಡಗಿದ್ದ ಬಾಂಗ್ಲಾದೇಶಿಗಳಿಗೆ ಹಾಗೂ ದಂಧೆಯ ಸಂತ್ರಸ್ತರಿಗೆ ನಕಲಿ ಗುರುತಿನ ಚೀಟಿ ದಾಖಲೆ ಸೃಷ್ಟಿಸುತ್ತಿದ್ದ ಪ್ರಕರಣದಲ್ಲಿ ಎನ್ಎಇಐ ಶೋಧಕಾರ್ಯಾಚರಣೆ ನಡೆಸಿದೆ. 

ನವದೆಹಲಿ: ಮಾನವಕಳ್ಳಸಾಗಣೆಯಲ್ಲಿ ತೊಡಗಿದ್ದ ಬಾಂಗ್ಲಾದೇಶಿಗಳಿಗೆ ಹಾಗೂ ದಂಧೆಯ ಸಂತ್ರಸ್ತರಿಗೆ ನಕಲಿ ಗುರುತಿನ ಚೀಟಿ ದಾಖಲೆ ಸೃಷ್ಟಿಸುತ್ತಿದ್ದ ಪ್ರಕರಣದಲ್ಲಿ ಎನ್ಎಇಐ ಶೋಧಕಾರ್ಯಾಚರಣೆ ನಡೆಸಿದೆ. 

ಬೆಂಗಳೂರಿನ ರಾಮಮೂರ್ತಿ ನಗರದ ಎರಡು ಪ್ರದೇಶದಲ್ಲಿ ಎನ್ಐಎ ಶೋಧಕಾರ್ಯಾಚರಣೆ ನಡೆದಿದೆ. 

ರಾಮಮೂರ್ತಿ ನಗರದಲ್ಲಿನ ಬಾಡಿಗೆ ಮನೆಯಲ್ಲಿದ್ದ ಬಾಂಗ್ಲಾದೇಶದ 7 ಮಹಿಳೆಯರು ಹಾಗೂ ಒಂದು ಮಗುವನ್ನು ಮಾನವ ಕಳ್ಳಸಾಗಣೆ ಜಾಲದಿಂದ ಜೂನ್ ನಲ್ಲಿ ರಕ್ಷಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಕಳ್ಳಸಾಗಣೆ ಜಾಲದ ಮೇಲೆ ಎನ್ಐಎ ದಾಳಿ ನಡೆದಿದೆ. 

ನೌಕರಿ ಕೊಡಿಸುವ ಆಮಿಷವೊಡ್ಡಿ ಮಹಿಳೆಯರನ್ನು ಬಾಂಗ್ಲಾದೇಶದಿಂದ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಬಳಿಕ ಆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಬಳಕೆ ಮಾಡಿಕೊಳ್ಳಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದೇಶಿಗರ ಕಾಯ್ದೆ, ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಎನ್ಐಎ ಪ್ರಕರಣವನ್ನು ಮರುದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದೆ. ಶೋಧಕಾರ್ಯಾಚರಣೆಯಲ್ಲಿ ದಾಖಲೆಗಳು, 6 ಡಿಜಿಟಲ್ ಡಿವೈಸ್ ಗಳು, ಹಾರ್ಡ್ ಡಿಸ್ಕ್ ಗಳು, ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT