ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ಮೂರನೇ ಅಲೆ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ದೂರವಿಡಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಬಿಸಿ ನಾಗೇಶ್

ಕೋವಿಡ್ 3ನೇ ಅಲೆ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ದೂರವಿಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

ಬೆಂಗಳೂರು: ಕೋವಿಡ್ 3ನೇ ಅಲೆ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ದೂರವಿಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ  ಬಳಿಕ ಶಿಕ್ಷಣ ಖಾತೆ ವಹಿಸಿಕೊಂಡಿರುವ ಬಿಸಿ ನಾಗೇಶ್, ತಮ್ಮ ಮುಂದಿನ ಸಾವಲುಗಳ ಕುರಿತು ಮಾತನಾಡಿದರು.

ಪ್ರಮುಖವಾಗಿ ಕೋವಿಡ್ ಮೂರನೇ ಅಲೆ ಕುರಿತು ಮಾತನಾಡಿದ ನಾಗೇಶ್ ಅವರು, ಕೋವಿಡ್ 3ನೇ ಅಲೆಯ ಭೀತಿ ಇದೆಯಾದರೂ, ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ದೂರವಿಡಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಯಾದಗಿರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಸಿ ನಾಗೇಶ್ ಅವರು, ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಅವರ ಕಾರ್ಯವನ್ನು ಶ್ಲಾಘಿಸಿದರು. ಕೋವಿಡ್ ಸಾಂಕ್ರಾಮಿಕದಂತಹ ಸಮಯದಲ್ಲಿಯೂ ಕಲಿಕೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗಾಗಿ ಅವರು ಕೈಗೊಂಡ ಕ್ರಮಗಳನ್ನು ಶ್ಲಾಘಿಸಿದರು. ಸುರೇಶ್ ಕುಮಾರ್ ಅವರ ಶ್ರಮದಿಂದಾಗಿ ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಕಲಿಕೆ ಮುಂದುವರೆದಿದೆ. ಅದನ್ನು ಮುಂದುವರಿಸಲಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT