ಸಂಗ್ರಹ ಚಿತ್ರ 
ರಾಜ್ಯ

ಕುಡಿದ ಅಮಲಿನಲ್ಲಿ ಡಿಜೆಯಿಂದ ಸರಣಿ ಅಪಘಾತ: ಇಬ್ಬರ ಸಾವು

ಕುಡಿದ ಅಮಲಿನಲ್ಲಿ ಡಿಜೆಯೊಬ್ಬ ವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿದ್ದರಿಂದ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಬನಶಂಕರಿಯ ಸುಚಿತ್ರ ಥಿಯೇಟರ್ ಬಳಿ ಶನಿವಾರ ನಡೆದಿದೆ. 

ಬೆಂಗಳೂರು: ಕುಡಿದ ಅಮಲಿನಲ್ಲಿ ಡಿಜೆಯೊಬ್ಬ ವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿದ್ದರಿಂದ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಬನಶಂಕರಿಯ ಸುಚಿತ್ರ ಥಿಯೇಟರ್ ಬಳಿ ಶನಿವಾರ ನಡೆದಿದೆ. 

ಪಾನಮತ್ತನಾಗಿ ಕಾರು ಚಲಾಯಿಸಿದ್ದ ಡಿಜೆ ಪದ್ಮನಾಭನಗರ ನಿವಾಸಿ ಸುಹಾಸ್ ವೆಂಕಟೇಶ್ (26) ಎಂದು ತಿಳಿದುಬಂದಿದೆ. 

ಘಟನೆಯಲ್ಲಿ ಮೃತಪಟ್ಟವರನ್ನು ಸೀತಾರಾಮ್ (40) ಹಾಗೂ ಕೀರ್ತಿ ರಾಮ್ (29) ಎಂದು ಗುರ್ತಿಸಲಾಗಿದ್ದು, ಇಬ್ಬರೂ ರಾಜಸ್ಥಾನ ಮೂಲದವರಾಗಿದ್ದು, ಬನಶಂಕರಿಯ ಕಾವೇರಿ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು ಎಂದು ಹೇಳಲಾಗುತ್ತಿದೆ. 

ಮೃತರಿಬ್ಬರೂ ಮರಗೆಲಸ ಮಾಡುತ್ತಿದ್ದು, ಅಪಘಾತ ಸಂಭವಿಸಿದ ದಿನ ರಾತ್ರಿ 10 ಗಂಟೆ ಸುಮಾರಿಗೆ ಇಬ್ಬರೂ ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪಾರ್ಟಿಯಿಂದ ತನ್ನ ಸ್ನೇಹಿತೆ ಜೊತೆ ಮರಳುವಾಗ ಪಾನಮತ್ತನಾಗಿದ್ದ ಸುಹಾಸ್, ವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿದ್ದಾನೆ. ಮೊದಲಿಗೆ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದ ಆತ ಬಳಿಕ ಬೈಕ್'ಗೆ ಡಿಕ್ಕಿ ಹೊಡೆದಿದ್ದಾನೆ. 

ಈ ವೇಳೆ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಕೀರ್ತಿ ರಾಮಾ್ ಹಾಗೂ ಸೀತಾರಾಮ್ ಇಬ್ಬರು ಕಳೆಗೆ ಬಿದ್ದಿದ್ದಾರೆ. ಇಬ್ಬರೂ ಹೆಲ್ಮೆಟ್ ಧರಿಸದ ಕಾರಣ ಬಿದ್ದ ರಭಕ್ಕೆ ಇಬ್ಬರ ತಲೆಗೂ ಗಂಭೀರ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಘಟನೆಯಲ್ಲಿ ಡಿಜೆ ಸುಹಾಸ್'ಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ರಕ್ತದ ಪರೀಕ್ಷೆ ವೇಳೆ ಸುಹಾಸ್ ಪಾನಮತ್ತನಾಗಿದ್ದ ಎಂಬುದು ದೃಢಪಟ್ಟಿದೆ. ಆಸ್ಪತ್ರೆಯಲ್ಲಿ ಸುಹಾಸ್ ಚಿಕಿತ್ಸೆ ಪಡೆಯುತ್ತಿರುವುದರಿಂದ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಕಾದು ಕುಳಿತಿದ್ದಾರೆಂದು ತಿಳಿದುಬಂದಿದೆ. 

ಘಟನೆ ಕುರಿತು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಕಾರನ್ನು ಅಡ್ಡಾದಿಟ್ಟಿ ಚಲಾಯಿಸಲಾಗುತ್ತಿತ್ತು. ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಮೊದಲಿಗೆ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದಿದ್ದ. ಬಳಿಕ ಬೈಕ್'ಗೆ ಡಿಕ್ಕಿ ಹೊಡೆದರು. ಘಟನೆ ಬಳಿಕ ಸ್ಥಳದಿಂದ ಕಾಲ್ಕಿತ್ತಲು ಕಾರಿನಲ್ಲಿದ್ದ ಚಾಲಕ ಹಾಗೂ ಸ್ನೇಹಿತೆ ಇಬ್ಬರು ಪ್ರಯತ್ನಿಸಿದ್ದರು. ಆದರೆ, ಸ್ಥಳೀಯರು ಚಾಲಕ ಸುಹಾಸ್ ನನ್ನು ಹಿಡಿದು ಪೊಲೀಸರು ವಶಕ್ಕೆ ನೀಡಿದ್ದರು. ಆದರೆ, ಕಾರಿನಲ್ಲಿದ್ದ ಯುವತಿ ಅಪಘಾತಕ್ಕೀಡಾದ ಇಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದರೂ ಸಹಾಯ ಮಾಡದೆ ಸ್ಥಳದಿಂದ ಪರಾರಿಯಾಗಿದ್ದಳು ಎಂದು ಹೇಳಿದ್ದಾರೆ. 

ಮೃತಪಟ್ಟವರ ಸಂಬಂಧಿಕರು ಹೇಳಿಕೆ ನೀಡಿ, ಇಬ್ಬರೂ 8 ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದರು. ಅಪಾರ್ಟ್ ಮೆಂಟರ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾಜಸ್ಥಾನದಲ್ಲಿಯೇ ಕುಟುಂಬಸ್ಥರನ್ನು ಬಿಟ್ಟು ನಗರಕ್ಕೆ ಬಂದಿದ್ದರು. ಎರಡು ತಿಂಗಳ ಹಿಂದಷ್ಟೇ ಕುಟುಂಬಸ್ಥರನ್ನು ಭೇಟಿ ಮಾಡಿ ಬಂದಿದ್ದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!