ಜೋಗ ಜಲಪಾತ 
ರಾಜ್ಯ

ವ್ಯರ್ಥ ಖರ್ಚು: ಜೋಗ ಜಲಪಾತ ಅಭಿವೃದ್ಧಿ ಪ್ರಸ್ತಾವನೆ ಬಗ್ಗೆ ಅಧಿಕಾರಿಗಳ ಅತೃಪ್ತಿ!

ತಮ್ಮ ಅಧಿಕಾರಾವಧಿಯ ಕೊನೆಯ ದಿನಗಳಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೋಗ ಜಲಪಾತ ನಿರ್ವಹಣಾ ಪ್ರಾಧಿಕಾರ ಮತ್ತು ಶಿವಮೊಗ್ಗ ಜಿಲ್ಲಾಡಳಿತದ ಮೂಲಕ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಪ್ರಸ್ತಾವನೆಯೊಂದನ್ನು ಅನುಮೋದಿಸಿದರು.

ಬೆಂಗಳೂರು: ತಮ್ಮ ಅಧಿಕಾರಾವಧಿಯ ಕೊನೆಯ ದಿನಗಳಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೋಗ ಜಲಪಾತ ನಿರ್ವಹಣಾ ಪ್ರಾಧಿಕಾರ ಮತ್ತು ಶಿವಮೊಗ್ಗ ಜಿಲ್ಲಾಡಳಿತದ ಮೂಲಕ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಪ್ರಸ್ತಾವನೆಯೊಂದನ್ನು ಅನುಮೋದಿಸಿದರು.

ಪ್ರಸ್ತಾವನೆಯ ಪ್ರಕಾರ, ಜಲಪಾತ ಮತ್ತು ಸುತ್ತಮುತ್ತಲಿನ ಕಾಂಕ್ರೀಟ್ ಮತ್ತು ನಾಗರಿಕ ಕೆಲಸಗಳಿಗಾಗಿ ಮೂರು ಹಂತಗಳಲ್ಲಿ 185 ಕೋಟಿ ರೂ. ವೆಚ್ಚವಾಗಲಿದೆ. ಮೇ 2021 ರಲ್ಲಿ ರಚಿಸಿದ ಮತ್ತು ಜುಲೈ 2021 ರಲ್ಲಿ ಅನುಮೋದನೆಗೊಂಡ ಪ್ರಸ್ತಾವನೆಯು ಜೋಗ ನಿರ್ವಹಣಾ ಸಮಿತಿಯ ಭಾಗವಾಗಿರುವ ಪ್ರವಾಸೋದ್ಯಮ ಇಲಾಖೆಯ ಅನೇಕ ಅಧಿಕಾರಿಗಳೊಂದಿಗೆ ಸರಿಯಾಗಲಿಲ್ಲ.

ರೋಪ್‌ವೇ ಸ್ಥಾಪನೆ, ಶರಾವತಿ ಪ್ರತಿಮೆ ಮತ್ತು ಮುಖ್ಯ ದ್ವಾರ, ಮಕ್ಕಳು ಮತ್ತು ವಿಜ್ಞಾನ ವಸ್ತು ಸಂಗ್ರಹಾಲಯ, ಮುಖ್ಯ ವೀಕ್ಷಣಾ ಸ್ಥಳ, ಕ್ಯಾಂಟೀನ್ ಮತ್ತು ವಿಶ್ರಾಂತಿ ಸ್ಥಳ, ಬಾಹ್ಯ ಮತ್ತು ಮಧ್ಯಂತರ ರಸ್ತೆಗಳು, ಪಾದಚಾರಿ ಮಾರ್ಗಗಳು, ಆಡಳಿತ ವಿಭಾಗ, ಡೆಸ್ಕ್ ಕೇಂದ್ರಗಳು, ಭದ್ರತಾ ಸಿಬ್ಬಂದಿ ಕೊಠಡಿಗಳು, ವಿಶೇಷ ಪಾರ್ಕಿಂಗ್ ಸೌಲಭ್ಯಗಳು, ಟ್ರಾಲಿ ಕೊಠಡಿಗಳು, ಕ್ವಾರ್ಟರ್ಸ್, ಬೋಟಿಂಗ್ ಮತ್ತು ಜಲಕ್ರೀಡೆಗಳು, ವಸ್ತುಸಂಗ್ರಹಾಲಯ, ಹೋಂಸ್ಟೇಗಳು, ಎಲ್ಲಾ ಕಾಲುದಾರಿಗಳ ಉದ್ದಕ್ಕೂ ವಿದ್ಯುತ್ ಕೆಲಸಗಳನ್ನು ಕೈಗೊಳ್ಳುವುದು ಈ ಪ್ರಸ್ತಾವನೆಯಲ್ಲಿದೆ.

ಯೋಜನೆಯು ಅನೇಕ ಅನಗತ್ಯ ನಿರ್ಮಾಣಗಳನ್ನು ಪಟ್ಟಿ ಮಾಡಿದೆ. ಕಳೆದ ವರ್ಷವಷ್ಟೇ ಸಮಿತಿಯು 165 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಚಿಸಲು ಯೋಜಿಸಿದ್ದು, ಈಗ ಮತ್ತಷ್ಟು ಹೆಚ್ಚಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರದೇಶವು ಭೂಕುಸಿತ ಮತ್ತು ಪರಿಸರ ವ್ಯವಸ್ಥೆಯ ನಾಶದ ಭೀತಿ ಇರುವುದರಿಂದ, ಕರ್ನಾಟಕ ಜೀವವೈವಿಧ್ಯ ಮಂಡಳಿಯ ಸದಸ್ಯರು ಶಿವಮೊಗ್ಗದಲ್ಲಿ ಯಾವುದೇ ಹೆಚ್ಚಿನ ಕಾಮಗಾರಿಗಳನ್ನು ಕೈಗೊಳ್ಳದಂತೆ ತೀವ್ರವಾಗಿ ವಿರೋಧಿಸಿದ್ದಾರೆ. 

ರೋಪ್‌ವೇಗಳು ಅರಣ್ಯೇತರ ಭೂಮಿಯಲ್ಲಿರುತ್ತವೆ ಎಂದು ಸಮಿತಿಯ ಸದಸ್ಯರು ಹೇಳುತ್ತಿದ್ದರೂ, ಇನ್ನೊಂದು ತುದಿಯು ಅರಣ್ಯ ಭೂಮಿಯನ್ನು ಗುರುತಿಸುವಲ್ಲಿ ಅವರು ವಿಫಲರಾಗಿದ್ದಾರೆ. ಜಲಪಾತದ ಮೂಲಕ ರೋಪ್ ವೇ ನಿರ್ಮಿಸುವ ಯೋಜನೆ ವ್ಯರ್ಥ ಖರ್ಚು. ರಾತ್ರಿಯಲ್ಲಿ ಜಲಪಾತವನ್ನು ಬೆಳಗಿಸುವುದನ್ನು ಈಗಾಗಲೇ ಪ್ರಬಲ ವಿರೋಧ ವ್ಯಕ್ತವವಾಗಿದೆ ಎಂದು ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT