ಸಂಗ್ರಹ ಚಿತ್ರ 
ರಾಜ್ಯ

ವೀಕೆಂಡ್ ಕರ್ಫ್ಯೂ: ಕೇರಳ, ತಮಿಳುನಾಡು ಗಡಿಗಳಲ್ಲಿ ನೂರಾರು ಪ್ರಯಾಣಿಕರ ಸಂಕಷ್ಟ

ಕೊರೋನಾ ಸೋಂಕು ಭೀತಿಯಿಂದಾಗಿ ಸರ್ಕಾರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹೇರಿದ್ದು, ಇದರ ಪರಿಣಾಮ ಕರ್ನಾಟಕ-ತಮಿಳುನಾಡು ಹಾಗೂ ಕರ್ನಾಟಕ-ಕೇರಳ ಗಡಿಗಳಲ್ಲಿ ನೂರಾರು ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿತ್ತು.

ಮೈಸೂರು: ಕೊರೋನಾ ಸೋಂಕು ಭೀತಿಯಿಂದಾಗಿ ಸರ್ಕಾರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹೇರಿದ್ದು, ಇದರ ಪರಿಣಾಮ ಕರ್ನಾಟಕ-ತಮಿಳುನಾಡು ಹಾಗೂ ಕರ್ನಾಟಕ-ಕೇರಳ ಗಡಿಗಳಲ್ಲಿ ನೂರಾರು ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿತ್ತು. 

ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಲಾಗಿತ್ತು. ಕೇರಳದಿಂದ ಕರ್ನಾಟಕಕ್ಕೆ ಆಗಮಿಸಬೇಕಿದ್ದ ಜನರು ಆರ್'ಟಿ-ಪಿಸಿಆರ್ ನೆಗೆಟಿವ್ ವರದಿ ಇಟ್ಟುಕೊಂಡು ಬಂದಿದ್ದರೂ ಅವರನ್ನೂ ತಡೆಹಿಡಿಯಲಾಗಿತ್ತು. 

ಪರಿಣಾಮ ಗಡಿಯಲ್ಲಿದ್ದ ಅಧಿಕಾರಿಗಳೊಂದಿಗೆ ಸಾಕಷ್ಟು ಜನರು ಮಾತಿನ ಚಕಮಕಿ ನಡೆಸಿದ ಬೆಳವಣಿಗೆಗಳೂ ಕೂಡ ಕಂಡು ಬಂದಿತ್ತು. 

ಇದೇ ರೀತಿಯ ಪರಿಸ್ಥಿತಿ ಕರ್ನಾಟಕ-ತಮಿಳುನಾಡು ಗಡಿ ಪ್ರದೇಶದಲ್ಲಿಯೂ ನಿರ್ಮಾಣವಾಗಿತ್ತು. ಈ ಬೆಳವಣಿಗೆಯ ಪರಿಣಾಮ ಮೈಸೂರು-ಬೆಂಗಳೂರು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕೂಡ ಎದುರಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT