ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಜೆಪಿ ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದ್ದ ಸಂದರ್ಭ 
ರಾಜ್ಯ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ-ತುರಾಯಿ ಸನ್ಮಾನ ಬೇಡ, ಕನ್ನಡ ಪುಸ್ತಕ ನೀಡಿ: ಸರ್ಕಾರದ ಆದೇಶ

ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳ ಸಭೆ-ಸಮಾರಂಭಗಳಲ್ಲಿ ಇನ್ನು ಮುಂದೆ ಹಾರ-ತುರಾಯಿಗಳನ್ನು ಸನ್ಮಾನಗಳಿಗೆ ಬಳಸದೆ ಬದಲಾಗಿ ಕನ್ನಡ ಪುಸ್ತಕಗಳನ್ನು ಕಾಣಿಕೆ ರೂಪದಲ್ಲಿ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳ ಸಭೆ-ಸಮಾರಂಭಗಳಲ್ಲಿ ಇನ್ನು ಮುಂದೆ ಹಾರ-ತುರಾಯಿಗಳನ್ನು ಸನ್ಮಾನಗಳಿಗೆ ಬಳಸದೆ ಬದಲಾಗಿ ಕನ್ನಡ ಪುಸ್ತಕಗಳನ್ನು ಕಾಣಿಕೆ ರೂಪದಲ್ಲಿ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸೂಚನೆಯನ್ನು ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಸರ್ಕಾರದ ಅಧೀನದ ಎಲ್ಲಾ ಅಧಿಕಾರಿಗಳು ಪಾಲಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ. ಇನ್ನು ಮುಂದೆ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ನೀಡಿ ಅನಗತ್ಯ ಖರ್ಚು ಮಾಡುವ ಬದಲು ಕನ್ನಡ ಪುಸ್ತಕಗಳನ್ನು ನೀಡಿ ಎಂದು ಮುಖ್ಯಮಂತ್ರಿ ಬೊಮ್ಮಾಯಿಯವರು ಹೇಳಿದ್ದಾರೆ. 

ಮುಖ್ಯಮಂತ್ರಿ @BSBommai ರವರ ನಿರ್ದೇಶನದಂತೆ, ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. pic.twitter.com/SwSd4ZG5ca

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ!

ಅಯೋಧ್ಯೆಯ ರಾಜರ್ಷಿ ದಶರಥ್ ವೈದ್ಯಕೀಯ ಕಾಲೇಜ್ ನಲ್ಲಿ ಬಾಂಬ್ ತಯಾರಿಕೆ ಕಾಗದ ಪತ್ತೆ; ವಿದ್ಯಾರ್ಥಿ ಬಂಧನ

Commonwealth Games 2026: ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಸಾಕ್ಷಿ, ಪ್ರಿಯಾ

ಪ್ರಧಾನಿ ಮೋದಿಯನ್ನು ನಿಂದಿಸಿದ 15 ವರ್ಷದ ಹುಡುಗಿ ಹಿಂದೆ 'ಆ ಎರಡು ಗುಂಪುಗಳಿವೆ': ಕಂಗನಾ ಹೊಸ ಬಾಂಬ್!