ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಆಸ್ಪತ್ರೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ: ಬೊಮ್ಮಾಯಿ ಖಡಕ್ ಸೂಚನೆ

ಗ್ರಾಮೀಣ ಪ್ರದೇಶಗಳಿಗೆ ತಾರತಮ್ಯವಿಲ್ಲದ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು ವಿಶೇಷವಾಗಿ ಸೋರಿಕೆ ತಡೆಗಟ್ಟಿ, ಸ್ವಾವಲಂಬನೆ ಜೊತೆಗೆ ಸಮರ್ಪಕ ನಿರ್ವಹಣೆ  ಹೆಚ್ಚಿನ ಕಾಳಜಿ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು: ಗ್ರಾಮೀಣ ಪ್ರದೇಶಗಳಿಗೆ ತಾರತಮ್ಯವಿಲ್ಲದ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು ವಿಶೇಷವಾಗಿ ಸೋರಿಕೆ ತಡೆಗಟ್ಟಿ, ಸ್ವಾವಲಂಬನೆ ಜೊತೆಗೆ ಸಮರ್ಪಕ ನಿರ್ವಹಣೆ  ಹೆಚ್ಚಿನ ಕಾಳಜಿ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ  ಸೂಚಿಸಿದ್ದಾರೆ.

ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಈ ಸೂಚನೆ ನೀಡಿದ್ದಾರೆ. ಕೊರೋನ ಸಮಯದಲ್ಲಿ  ಆಸ್ಪತ್ರೆಗಳಿಗೆ ವಿದ್ಯುತ್ ಪೂರೈಕೆಯಲ್ಲಿ  ಯಾವುದೇ  ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ ವಿದ್ಯುತ್ತನ್ನು ಮಾರಾಟ ಮಾಡುವಂತಾಗಬೇಕು. ಕರ್ನಾಟಕ ವಿದ್ಯುತ್ ನಿಗಮದಿಂದ ವಿದ್ಯುತ್ ಉತ್ಪಾದನೆ ಅತ್ಯಂತ ದಕ್ಷತೆಯಿಂದ ಆಗಬೇಕು. ಜಲ ಮತ್ತು ವಿದ್ಯುತ್ ಘಟಕಗಳು ಅತಿ ಹೆಚ್ಚು ಕಾರ್ಯ ಕ್ಷಮತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಿಸಲಾಗಿರುವ ಬೋರ್ ವೆಲ್ ಗಳಿಗೆ ಯಾವುದೇ ರೀತಿಯ ತಡ ಮಾಡದೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕೋವಿಡ್ ಸಂದರ್ಭದಲ್ಲಿ ವಿಶೇಷವಾಗಿ ಆಸ್ಪತ್ರೆಗಳಿಗೆ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿರ್ದೇಶನ ನೀಡಿದರು. 

ಸಭೆಯಲ್ಲಿ ಇಂಧನ ಸಚಿವ ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್,  ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕಿ ಡಾ. ಎನ್.ಮಂಜುಳಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT