ಸಂಗ್ರಹ ಚಿತ್ರ 
ರಾಜ್ಯ

ಜಾರಕಿಹೊಳಿ ವಿರುದ್ಧ ಚೆಕ್ ಬೌನ್ಸ್ ಕೇಸ್: ಹೊಸದಾಗಿ ವಿಚಾರಣೆಗೆ ಹೈಕೋರ್ಟ್ ಸೂಚನೆ

ಚೆಕ್ ಬೌನ್ಸ್ ಆಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ 2ನೇ ಹೆಚ್ಚುವರಿ ಜೆಎಂಎಫ್'ಸಿ ಕೋರ್ಟ್'ಗೆ ಹೈಕೋರ್ಟ್ ನಿರ್ದೇಶಿಸಿದೆ. 

ಬೆಳಗಾವಿ: ಸಹಕಾರಿ ಬ್ಯಾಂಕಿನಿಂದ ಪಡೆದ ಸಾಲಕ್ಕೆ ಭದ್ರತೆಯಾಗಿ ನೀಡಿದ್ದ ರೂ.5.02 ಕೋಟಿ ಮೊತ್ತದ ಚೆಕ್ ಬೌನ್ಸ್ ಆಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ 2ನೇ ಹೆಚ್ಚುವರಿ ಜೆಎಂಎಫ್'ಸಿ ಕೋರ್ಟ್'ಗೆ ಹೈಕೋರ್ಟ್ ನಿರ್ದೇಶಿಸಿದೆ. 

ಪ್ರಕರಣ ಸಂಬಂಧ ಬೀರೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ. 

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೀರೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಸಾಲಪಡೆದಿದ್ದು, ಅದಕ್ಕೆ ಭದ್ರತೆಯಾಗಿ ನೀಡಿದ್ದ ರೂ.5.02 ಕೋಟಿ ಮೊತ್ತದ ಚೆಕ್ ಬೌನ್ಸ್ ಆಗಿತ್ತು. ಇದರಿಂದ 2016ರ ಜ.28ರಂದು ರಮೇಶ್ ಜಾರಕಿಹೊಳಿ ವಿರುದ್ದ ಸೊಸೈಟಿಯ ಖಾಸಗಿ ದೂರು ದಾಖಲಿಸಿತ್ತು. ದೂರು 2019ರ ನ.20ರಂದು ಚಿಕ್ಕೋಡಿಯ 2ನೇ ಹೆಚ್ಚುವರಿ ಜೆಎಂಎಫ್'ಸಿ ಕೋರ್ಟ್ ಮುಂದೆ ವಿಚಾರಣೆಗೆ ಬಂದಿತ್ತು.

ಅಂದು ದೂರುದಾರರ ಪರ ವಕೀಲರು ಗೈರಾಗಿದ್ದರು. ಅದನ್ನು ಪರಿಗಣಿಸಿದ್ದ ಜೆಎಂಎಫ್'ಕೋರ್ಟ್, ದೂರುದಾರರ ಪರ ವಕೀಲರು ವಿಚಾರಣೆಗೆ ಸರಿಯಾಗಿ ಹಾಜರಾಗುತ್ತಿಲ್ಲ. ನೋಟಿಸ್ ನೀಡಿದ ಹೊರತಾಗಿಯೂ ದೂರುದಾರರು ಕೋರ್ಟ್ ಶುಲ್ಕ ಪಾವತಿಸಿಲ್ಲ. ಇದರಿಂದ ದೂರನ್ನು ಮುಂದುವರಿಸಲು ದೂರುದಾರರಿಗೆ ಆಸಕ್ತಿ ಇಳ್ಲ ಎಂಬುದು ತಿಳಿಯುತ್ತದೆ ಎಂದು ಅಭಿಪ್ರಾಯಪಟ್ಟು ದೂರನ್ನು ವಜಾಗೊಳಿಸಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸೊಸೈಟಿ ಹೈಕೋರ್ಟ್'ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT