ಸಾಂದರ್ಭಿಕ ಚಿತ್ರ 
ರಾಜ್ಯ

ರೈಲು ಪ್ರಯಾಣಿಕರ ಸುರಕ್ಷತೆಗೆ ವಿಶೇಷ ಕಾರ್ಯಪಡೆ ರಚನೆ

ರಾಜ್ಯದ ಸರ್ಕಾರಿ ರೈಲ್ವೇ ಪೊಲೀಸ್(ಜಿ ಆರ್ ಪಿ) ಇಲಾಖೆ ರೈಲು ನಿಲ್ದಾಣಗಳಲ್ಲಿ ಭದ್ರತೆ ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಿದೆ. ಈ ಕಾರ್ಯಪಡೆಯಲ್ಲಿ 100 ಪೇದೆಗಳು ಕಾರ್ಯನಿರ್ವಹಿಸಲಿದ್ದಾರೆ.

ಬೆಂಗಳೂರು: ರಾಜ್ಯದ ಸರ್ಕಾರಿ ರೈಲ್ವೇ ಪೊಲೀಸ್ (ಜಿ ಆರ್ ಪಿ) ಇಲಾಖೆ ರೈಲು ನಿಲ್ದಾಣಗಳಲ್ಲಿ ಭದ್ರತೆ ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಿದೆ. ಈ ಕಾರ್ಯಪಡೆಯಲ್ಲಿ 100 ಪೇದೆಗಳು ಕಾರ್ಯನಿರ್ವಹಿಸಲಿದ್ದಾರೆ.

ಈ ಕಾರ್ಯ ಪಡೆ ಬೆಂಗಳೂರು, ಮೈಸೂರು ಮತ್ತು ಕಲಬುರಗಿ ವಿಭಾಗಗಳಲ್ಲಿ ಸಕ್ರಿಯವಾಗಿರಲಿದೆ ಎಂದು ಜಿ ಆರ್ ಪಿ ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರದಿಂದ ಈ ಕಾರ್ಯಪಡೆಗೆ ಅಧಿಕೃತ ಚಾಲನೆ ದೊರೆಯಲಿದೆ ಎಂದು ಜಿ ಆರ್ ಪಿ ಸೂಪರಿಂಟೆಂಡೆಂಟ್ ಸಿರಿ ಗೌರಿ ತಿಳಿಸಿದ್ದಾರೆ. 

ಕಾರ್ಯಪಡೆಯ ನೂರು ಪೇದೆಗಳಲ್ಲಿ 70 ಮಂದಿ ಪುರುಷ ಪೇದೆಗಳಾದರೆ, 30 ಮಂದಿ ಮಹಿಳಾ ಪೇದೆಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ವಿಶೇಷ ಕಾರ್ಯಪಡೆಗೆ ಪ್ರತ್ಯೇಕ ಸಮವಸ್ತ್ರವನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು. ಅಲ್ಲದೆ ಅವರಿಗೆ ವಿಶೇಷ ಆತ್ಮರಕ್ಷಣಾ ತರಬೇತಿ ನೀಡಲಾಗುವುದು. ಕಪ್ಪು ಟೀ ಶರ್ಟ್, ಸೇನೆಯ ಸಮವಸ್ತ್ರವನ್ನು ಹೋಲುವ ಹಸಿರು ಬಣ್ಣದ ವಿನ್ಯಾಸವನ್ನೊಳಗೊಂಡ ಪ್ಯಾಂಟ್ ಅನ್ನು ಸಮವಸ್ತ್ರವಾಗಿ ನೀಡಲಾಗುತ್ತಿದೆ. 

ಈ ಹಿಂದೆ ಜಿ ಆರ್ ಪಿ, ಬಿಸಿನೆಸ್ ಕಾರ್ಡ್ ಮಾದರಿಯ ಗುರುತಿನ ಚೀಟಿಗಳನ್ನು ತನ್ನ ಸಿಬ್ಬಂದಿ ವರ್ಗಕ್ಕೆ ನೀಡಿ ಅವರಲ್ಲಿ ಆತ್ಮಸ್ಥೈರ್ಯ ಮತ್ತು ವೃತ್ತಿ ಬಗೆಗೆ ಗೌರವ ಮೂಡಿಸುವ ಕೆಲಸ ಮಾಡಿತ್ತು ಎನ್ನುವುದು ಗಮನಾರ್ಹ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT