ಕರ್ನಾಟಕ ಹೈಕೋರ್ಟ್ 
ರಾಜ್ಯ

ನಾಯಕರ ವಿರುದ್ಧದ ಕೈಬಿಡಲಾದ ಪ್ರಕರಣಗಳ ಪಟ್ಟಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ರಾಜ್ಯದ ಸಂಸದರು ಮತ್ತು ಶಾಸಕರ ಮೇಲೆ ದಾಖಲಾಗಿದ್ದ ಪ್ರಕರಣಗಳಲ್ಲಿ ಸೆಪ್ಟೆಂಬರ್ 16, 2020ರ ಅವಧಿಗೂ ಮುನ್ನ ಹಿಂಪಡೆಯಲಾದ ಪ್ರಕರಣಗಳ ಪಟ್ಟಿಯನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಬೆಂಗಳೂರು: ರಾಜ್ಯದ ಸಂಸದರು ಮತ್ತು ಶಾಸಕರ ಮೇಲೆ ದಾಖಲಾಗಿದ್ದ ಪ್ರಕರಣಗಳಲ್ಲಿ ಸೆಪ್ಟೆಂಬರ್ 16, 2020ರ ಅವಧಿಗೂ ಮುನ್ನ ಹಿಂಪಡೆಯಲಾದ ಪ್ರಕರಣಗಳ ಪಟ್ಟಿಯನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. 

ಶಾಸಕರು ಹಾಗೂ ಸಂಸದರ ವಿರುದ್ಧ ದಾಖಲಾದ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸುವ ಪ್ರಕ್ರಿಯೆಯ ಮೇಲೆ ನಿಗಾ ಇರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿತ್ತು. ಅದರ ವಿಚಾರಣೆಯನ್ನು ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಮತ್ತು ಜಸ್ಟೀಸ್ ಎನ್ ಎಸ್ ಸಂಜಯ್ ಗೌಡ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಕ್ರಮಕ್ಕೆ ಮುಂದಾಗಿದೆ. 

ಶಾಸಕರು ಮತ್ತು ಸಂಸದರ ಮೇಲೆ ದಾಖಲಾಗಿರುವ ಯಾವುದೇ ಪ್ರಕರಣವನ್ನು ಹೈಕೋರ್ಟ್ ಗಮನಕ್ಕೆ ತಾರದೆ ಹಿಂಪಡೆಯಬಾರದು ಎಂದು ಮಂಗಳವಾರ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು ಈ ಸಂದರ್ಭದಲ್ಲಿ ಉಲ್ಲೇಖಾರ್ಹ.

ಅಗಸ್ಟ್ 2020ರಲ್ಲಿ ಕರ್ನಾಟಕ ಶಾಸಕರ ಮೇಲಿನ ೬೧ ಪ್ರಕರಣಗಳನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದ್ದನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತರಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT