ಬಸವರಾಜ ಬೊಮ್ಮಾಯಿ 
ರಾಜ್ಯ

ಸೆಪ್ಟಂಬರ್ 3ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ: ಬೊಮ್ಮಾಯಿ ಸರ್ಕಾರಕ್ಕೆ ಮೊದಲ 'ಅಗ್ನಿಪರೀಕ್ಷೆ'!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ನಂತರ ಭುಗಿಲೆದ್ದಿರುವ ಅಸಮಾಧಾನ ಮತ್ತು ಬಂಡಾಯಗಾರರ ಮನವೊಲಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ನಂತರ ಭುಗಿಲೆದ್ದಿರುವ ಅಸಮಾಧಾನ ಮತ್ತು ಬಂಡಾಯಗಾರರ ಮನವೊಲಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ, ಇದೇ ವೇಳೆ ರಾಜ್ಯ ಚುನಾವಣಾ ಆಯೋಗ  ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ ನಗರ ಪಾಲಿಕೆಗಳಿಗೆ ರಾಜ್ಯ ಚುನಾವಣಾ ಆಯೋಗ ಬುಧವಾರದಂದು ಚುನಾವಣಾ ದಿನಾಂಕ ಘೋಷಣೆ ಮಾಡಿದೆ.

ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರಾಜ್ಯ ಚುನಾವಣಾ ಆಯೋಗಕ್ಕೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಹುಬ್ಬಳ್ಳಿ-ಧಾರವಾಡ, ಇದರಲ್ಲಿ 82 ವಾರ್ಡ್‌ಗಳು, ಕಲಬುರಗಿ (55 ವಾರ್ಡ್‌ಗಳು) ಮತ್ತು ಬೆಳಗಾವಿ (58 ವಾರ್ಡ್‌ಗಳು). ದೊಡ್ಡಬಳ್ಳಾಪುರ, ತರೀಕೆರೆ ಮತ್ತು ಇತರ ಕೆಲವು ಸ್ಥಳಗಳ ನಗರ ಪಾಲಿಕೆಗಳಿಗೆ ಸೆಪ್ಟಂಬರ್ 3ರಂದು ಮತದಾನ ನಡೆಯಲಿದೆ. ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುವ ಮೂರು ಕ್ಷೇತ್ರಗಳು ಉತ್ತರ ಕರ್ನಾಟಕದಲ್ಲಿರುವುದರಿಂದ ಮುಖ್ಯಮಂತ್ರಿ ಬಸವರಜ ಬೊಮ್ಮಾಯಿ ಅವರ ಮೇಲೆ ಹೆಚ್ಚಿನ ಒತ್ತಡ ಬೀಳಲಿದೆ.

ಹುಬ್ಬಳ್ಳಿ-ಧಾರವಾಡದ ಅವಳಿ ನಗರಗಳು, ಕಲಬುರಗಿ ಮತ್ತು ಬೆಳಗಾವಿಯಲ್ಲಿ ಕೂಡ ಉತ್ತಮ ಸಂಖ್ಯೆಯ ಲಿಂಗಾಯತ ಮತದಾರರಿದ್ದಾರೆ. ಸಿಎಂ ಬೊಮ್ಮಾಯಿ ಮತ್ತು ಅವರ ಸಂಪುಟದ 8 ಸಚಿವರು ಲಿಂಗಾಯತ ಸಮುದಾಯಕ್ಕೇ ಸೇರಿರುವ ಕಾರಣ ಇದನ್ನು ಸದುಪಯೋಗ ಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.

ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ರಾಜ್ಯವು 19 ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಸಾಕ್ಷಿಯಾಯಿತು. ಈ 16 ಉಪಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಡಿಸೆಂಬರ್ 2020 ರಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಪಕ್ಷವು ಹೇಳಿಕೊಂಡಿದೆ.

ಆಗಸ್ಟ್ 16ರಂದು ಚುನಾವಣಾ ಅಧಿಸೂಚನೆಯನ್ನು ಜಿಲ್ಲಾಧಿಕಾರಿಗಳು ಹೊರಡಿಸಲಿದ್ದಾರೆ. ಆಗಸ್ಟ್ 23 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಆಗಸ್ಟ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಆಗಸ್ಟ್ 26 ನಾಮಪತ್ರಗಳನ್ನು ಹಿಂದಕ್ಕೆ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT