ಡಾ. ಸಿ.ಎನ್. ಅಶ್ವತ್ಥ ನಾರಾಯಣ 
ರಾಜ್ಯ

ರಾಮನಗರ: ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ- ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡುವುದಾಗಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ರಾಮನಗರ: ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡುವುದಾಗಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳು ಜಾರಿಯಾಗಿವೆ. ಹಲವು ಯೋಜನೆಗಳು ಪ್ರಗತಿಯ ಹಂತದಲ್ಲಿದ್ದು, ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದರು.

ನಂತರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲೆಯ ರೈತರಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವರು, ದೇಶದ ಬೆನ್ನೆಲ್ಲುಬಾಗಿರುವ ರೈತ ಬಾಂಧವರ ಸುರಕ್ಷತೆ ಅತ್ಯಂತ ಮುಖ್ಯವಾಗಿದೆ. ಎಲ್ಲರೂ ಲಸಿಕೆ ಪಡೆದುಕೊಳ್ಳಲು ಮರೆಯದಿರಿ ಎಂದರು.

ಕೋವಿಡ್-19 ಮೂರನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಅವರು, ಸೋಂಕು ತಡೆಯುವಲ್ಲಿ ಲಸಿಕೆ, ಸಾಮಾಜಿಕ ಅಂತರ, ಸಮರ್ಪಕ ಸಿದ್ಧತಾ ಕ್ರಮಗಳು ಅತ್ಯಮೂಲ್ಯ ಎಂದರು.

ಬಳಿಕ ಚೆನ್ನಪಟ್ಟಣ ತಾಲೂಕಿನ ಹೊಸಹಳ್ಳಿಯ ರೈತರ ಉತ್ಪಾದಕರ ಸಂಸ್ಥೆ  ಸ್ಥಳಕ್ಕೆ ಭೇಟಿ ನೀಡಿದರು. ರೈತರಿಂದ ಖರೀದಿಸಿದ ತೆಂಗಿನ ಕಾಯಿಗಳನ್ನು  ಸಂಸ್ಕರಿಸಿ ಅವುಗಳನ್ನು ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಹೆಚ್ಚು ಯಶಸ್ವಿಯಾಗಿದ್ದು, ಲಾಭದಾಯಕ ಕೂಡಾ ಆಗಿದೆ. ಈ ಮೊದಲಿಗಿಂತಲೂ ರೈತರಿಗೆ ಹೆಚ್ಚಿನ ದರ ಸಿಗುತ್ತಿದೆ ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಶಾಲೆಗೆ ಉಚಿತವಾಗಿ ಜಮೀನು ನೀಡಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT