ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಕೊರೋನಾ 3ನೇ ಅಲೆ ತಗ್ಗಿಸಲು ತಜ್ಞರ ಸಲಹೆ ಪಡೆದು ನಿರ್ಧಾರ; ತುರ್ತು ಸಭೆ ಕರೆದ ಸಿಎಂ; ಅಂಗಾಂಗ ದಾನಕ್ಕೆ ಬೊಮ್ಮಾಯಿ ಕರೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೊರೋನಾ 3ನೇ ಅಲೆ ಏಳುವ ಲಕ್ಷಣ ದಟ್ಟವಾಗಿ ಕಾಡುತ್ತಿದೆ. ಮಕ್ಕಳಲ್ಲಿ ವಿಶೇಷವಾಗಿ ಕಳೆದ 10 ದಿನಗಳಿಂದ ಕೊರೋನಾ ಮಹಾಮಾರಿ ಕಾಣಿಸಿಕೊಳ್ಳುತ್ತಿದೆ.

ಉಡುಪಿ: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೊರೋನಾ 3ನೇ ಅಲೆ ಏಳುವ ಲಕ್ಷಣ ದಟ್ಟವಾಗಿ ಕಾಡುತ್ತಿದೆ. ಮಕ್ಕಳಲ್ಲಿ ವಿಶೇಷವಾಗಿ ಕಳೆದ 10 ದಿನಗಳಿಂದ ಕೊರೋನಾ ಮಹಾಮಾರಿ ಕಾಣಿಸಿಕೊಳ್ಳುತ್ತಿದೆ.

ರಾಜ್ಯದಲ್ಲಿ ಕೊರೊನಾ 3ನೇ ಅಲೆ ತಗ್ಗಿಸಲು ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿಯಲ್ಲಿ ಇಂದು ಬೆಳಗ್ಗೆ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ಇಂದು ಬೆಂಗಳೂರಿಗೆ ಬಂದ ತಕ್ಷಣ ತಜ್ಞರ ತುರ್ತು ಸಭೆ ಕರೆದಿದ್ದಾರೆ. ತಜ್ಞರ ವರದಿ ಮತ್ತು ಅವರ ಅಭಿಪ್ರಾಯ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಹೆಚ್ಚಿನ ಮಂದಿ ಅಂಗಾಂಗ ದಾನಕ್ಕೆ ಮುಂದೆ ಬನ್ನಿ: ಇಂದು ವಿಶ್ವ ಅಗಾಂಗ ದಿನವಾಗಿದ್ದು, ಅಂಗಾಂಗ ದಾನ ಮಾಡುವುದಿರಿಂದ ಮತ್ತು ಅದನ್ನು ಕಸಿ ಮಾಡುವುದರಿಂದ ಅನೇಕ ಜೀವನಗಳನ್ನು ಉಳಿಸಬಹುದು ಮತ್ತು ಅನೇಕರ ಬಾಳಿಗೆ ಬೆಳಕಾಗುತ್ತದೆ. ಅದು ಹೃದಯ, ಕಿಡ್ನಿ, ಯಕೃತ್ ಹೀಗೆ ಬೇರೆ ಬೇರೆ ಅಂಗಾಂಗಗಳ ಯಶಸ್ವಿಯಾಗಿ ಕಸಿಯಾಗುತ್ತಿದೆ. ಹೀಗಿರುವಾಗ ಹೆಚ್ಚಿನ ಮಂದಿ ಅಂಗಾಂಗ ದಾನಗಳಿಗೆ ಮುಂದೆ ಬಂದರೆ ಸಾವಿರಾರು ಜೀವಗಳನ್ನು ಉಳಿಸಬಹುದು, ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಮಾಡುತ್ತಿದ್ದೇನೆ, ನೀವು ಕೂಡ ಮಾಡಿ ಎಂದು ರಾಜ್ಯದ ಜನತೆಗೆ ಸಿಎಂ ಕರೆ ನೀಡಿದರು.

ಜೀವ ಹೋದ ಕೂಡಲೇ ನಮ್ಮ ಅಂಗಾಂಗಳಿಂದ ಇನ್ನೊಂದು ಜೀವದ ಬದುಕಿಗೆ ಬೆಳಕಾಗಿ ದಾರಿದೀಪವಾಗುವುದಾದರೆ ನಾವ್ಯಾಕೆ ನಮ್ಮ ಅಂಗಾಂಗಳನ್ನು ಮಣ್ಣು ಮಾಡದೆ ದಾನ ಮಾಡಬಾರದು, ಈ ನಿಟ್ಟಿನಲ್ಲಿ ಜನರು ಯೋಚಿಸಿ ಅಂಗಾಂಗ ದಾನಕ್ಕೆ ಸಹಿ ಹಾಕಲು ಮುಂದೆ ಬನ್ನಿ ಎಂದು ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT