ಮಹೇಶ್ 
ರಾಜ್ಯ

ಕೊಳ್ಳೇಗಾಲ ಶಾಸಕ ಎನ್ ಮಹೇಶ್ ಬಿಜೆಪಿ ಸೇರ್ಪಡೆಗೆ ವಿರೋಧ: ದಲಿತ ಸಂಘಟನೆಗಳ ಪ್ರತಿಭಟನೆ

ಉಚ್ಛಾಟಿತ ಬಿಎಸ್ ಪಿ ಶಾಸಕ ಎನ್ ಮಹೇಶ್ ಬಿಜೆಪಿ ಸೇರಿದ್ದನ್ನು ವಿರೋಧಿಸಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಮೈಸೂರು: ಉಚ್ಛಾಟಿತ ಬಿಎಸ್ ಪಿ ಶಾಸಕ ಎನ್ ಮಹೇಶ್ ಬಿಜೆಪಿ ಸೇರಿದ್ದನ್ನು ವಿರೋಧಿಸಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತ ಪಡಿಸಿದರು.  ಮಹಿಳಾ ಘಟಕ ಪೊರಕೆ ಹಿಡಿದು ಪ್ರತಿಭಟನೆ ನಡೆಸಿತು.

ಒಂದು ಕಾಲದಲ್ಲಿ ಅಂಬೇಡ್ಕರ್ ವಾದ ಮತ್ತು ಜಾತ್ಯತೀತ ಮೌಲ್ಯಗಳನ್ನು ಬೋಧಿಸಿದ ಮಹೇಶ್ ಅವರು ಹಿಂದುಳಿದ ಸಮುದಾಯಗಳನ್ನು ತೊರೆದಿದ್ದಾರೆ ಎಂದು ಅವರು ಆರೋಪಿಸಿದರು. ಅವರು ತಮ್ಮ ರಾಜಕೀಯ ಉಳಿವಿಗಾಗಿ ಬಿಜೆಪಿಗೆ ಸೇರಿದರು ಎಂದು ಆಪಾದಿಸಿದ್ದಾರೆ.

ಮಹೇಶ್ ಅವರು ಬಿಜೆಪಿ ಸೇರುವ ಮೂಲಕ ದಲಿತ ನಾಯಕರನ್ನು ಅವಮಾನಿಸಿದ್ದಾರೆ, ಮಹೇಶ್ ಅವರು ಮನುವಾದಿ ಸಂಸ್ಕೃತಿಯ ವಿರುದ್ಧ ಮಾತನಾಡುವ ಮೂಲಕ ಬಿಎಸ್‌ಪಿ ಟಿಕೆಟ್‌ನಲ್ಲಿ ಶಾಸಕರಾಗಿ ಆಯ್ಕೆಯಾದರು. ಆದರೆ ಬಿಜೆಪಿ ಸೇರುವ ಮುನ್ನ ಕ್ಷೇತ್ರದ ಮತದಾರರ ಜೊತೆ ಚರ್ಚಿಸದೇ ನಿರ್ಧಾರ ತೆಗೆದುಕೊಳ್ಳುವ ಮೂಲಕ  ಕೈಬಿಟ್ಟಿರುವುದು ದುರದೃಷ್ಟಕರ ಎಂದು ಕಾರ್ಪೊರೇಟರ್ ಆರ್ ಪಿ ನಂಜುಂಡಸ್ವಾಮಿ ದೂರಿದ್ದಾರೆ. ಮಹೇಶ್ ರಾಜೀನಾಮೆ ನೀಡುವವರೆಗೂ ಅವರು ಅವಕಾಶವಾದಿ ರಾಜಕಾರಣದ ವಿರುದ್ಧ ಅನಿರ್ದಿಷ್ಟ ಚಳುವಳಿಯನ್ನು ನಡೆಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT