ಮಹೇಶ್ 
ರಾಜ್ಯ

ಕೊಳ್ಳೇಗಾಲ ಶಾಸಕ ಎನ್ ಮಹೇಶ್ ಬಿಜೆಪಿ ಸೇರ್ಪಡೆಗೆ ವಿರೋಧ: ದಲಿತ ಸಂಘಟನೆಗಳ ಪ್ರತಿಭಟನೆ

ಉಚ್ಛಾಟಿತ ಬಿಎಸ್ ಪಿ ಶಾಸಕ ಎನ್ ಮಹೇಶ್ ಬಿಜೆಪಿ ಸೇರಿದ್ದನ್ನು ವಿರೋಧಿಸಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಮೈಸೂರು: ಉಚ್ಛಾಟಿತ ಬಿಎಸ್ ಪಿ ಶಾಸಕ ಎನ್ ಮಹೇಶ್ ಬಿಜೆಪಿ ಸೇರಿದ್ದನ್ನು ವಿರೋಧಿಸಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತ ಪಡಿಸಿದರು.  ಮಹಿಳಾ ಘಟಕ ಪೊರಕೆ ಹಿಡಿದು ಪ್ರತಿಭಟನೆ ನಡೆಸಿತು.

ಒಂದು ಕಾಲದಲ್ಲಿ ಅಂಬೇಡ್ಕರ್ ವಾದ ಮತ್ತು ಜಾತ್ಯತೀತ ಮೌಲ್ಯಗಳನ್ನು ಬೋಧಿಸಿದ ಮಹೇಶ್ ಅವರು ಹಿಂದುಳಿದ ಸಮುದಾಯಗಳನ್ನು ತೊರೆದಿದ್ದಾರೆ ಎಂದು ಅವರು ಆರೋಪಿಸಿದರು. ಅವರು ತಮ್ಮ ರಾಜಕೀಯ ಉಳಿವಿಗಾಗಿ ಬಿಜೆಪಿಗೆ ಸೇರಿದರು ಎಂದು ಆಪಾದಿಸಿದ್ದಾರೆ.

ಮಹೇಶ್ ಅವರು ಬಿಜೆಪಿ ಸೇರುವ ಮೂಲಕ ದಲಿತ ನಾಯಕರನ್ನು ಅವಮಾನಿಸಿದ್ದಾರೆ, ಮಹೇಶ್ ಅವರು ಮನುವಾದಿ ಸಂಸ್ಕೃತಿಯ ವಿರುದ್ಧ ಮಾತನಾಡುವ ಮೂಲಕ ಬಿಎಸ್‌ಪಿ ಟಿಕೆಟ್‌ನಲ್ಲಿ ಶಾಸಕರಾಗಿ ಆಯ್ಕೆಯಾದರು. ಆದರೆ ಬಿಜೆಪಿ ಸೇರುವ ಮುನ್ನ ಕ್ಷೇತ್ರದ ಮತದಾರರ ಜೊತೆ ಚರ್ಚಿಸದೇ ನಿರ್ಧಾರ ತೆಗೆದುಕೊಳ್ಳುವ ಮೂಲಕ  ಕೈಬಿಟ್ಟಿರುವುದು ದುರದೃಷ್ಟಕರ ಎಂದು ಕಾರ್ಪೊರೇಟರ್ ಆರ್ ಪಿ ನಂಜುಂಡಸ್ವಾಮಿ ದೂರಿದ್ದಾರೆ. ಮಹೇಶ್ ರಾಜೀನಾಮೆ ನೀಡುವವರೆಗೂ ಅವರು ಅವಕಾಶವಾದಿ ರಾಜಕಾರಣದ ವಿರುದ್ಧ ಅನಿರ್ದಿಷ್ಟ ಚಳುವಳಿಯನ್ನು ನಡೆಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT