ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು ದಸರಾದಲ್ಲಿ ಭಾಗವಹಿಸುವ ಆನೆಗಳಿಗೂ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ!

ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ಈ ಬಾರಿಯೂ ನಾಡ ಹಬ್ಬ-ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡುವ ಸಾಧ್ಯತೆ ಇದ್ದು, ಜಂಬೂ ಸವಾರಿಯಲ್ಲಿ ಭಾಗವಹಿಸಲು ಯಾವ ಆನೆಗಳಿಗೆ ಅನುಮತಿ ನೀಡಲಾಗುತ್ತದೆ..

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ಈ ಬಾರಿಯೂ ನಾಡ ಹಬ್ಬ-ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡುವ ಸಾಧ್ಯತೆ ಇದ್ದು, ಜಂಬೂ ಸವಾರಿಯಲ್ಲಿ ಭಾಗವಹಿಸಲು ಯಾವ ಆನೆಗಳಿಗೆ ಅನುಮತಿ ನೀಡಲಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸಿದೆ.

ಏಕೆಂದರೆ ಈ ಬಾರಿ ಕೇವಲ ಮಾವುತರು, ಕಾವಡಿಗಳು, ದಸರಾ ಸಂಘಟನಾ ಸಮಿತಿ ಸದಸ್ಯರು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಮಾತ್ರವಲ್ಲದೆ ಆನೆಗಳಿಗೂ ಕೋವಿಡ್ ನೆಗಟಿವ್ ವರದಿ ಕಡ್ಡಾಯ ಮಾಡಲಾಗಿದೆ.

ಕಳೆದ ವರ್ಷ, ಆನೆಗಳನ್ನು ಗಜಪಯಣದ ನಂತರ ಮೈಸೂರಿಗೆ ಕರೆತಂದಾಗ ಕೋವಿಡ್ ಪರೀಕ್ಷಿಸಲಾಯಿತು ಮತ್ತು 13-14 ಆನೆಗಳ ಬದಲಾಗಿ ಕೇವಲ ಐದು ಆನೆಗಳನ್ನು ಮಾತ್ರ ಕರೆ ತರಲಾಗಿತ್ತು. ಅಭಿಮನ್ಯು(ಚಿನ್ನದ ಅಂಬಾರಿ ಹೊತ್ತಿದ್ದ), ವಿಕ್ರಮ್, ಕಾವೇರಿ ಮತ್ತು ವಿಜಯ ಸೇರಿದಂತೆ ಮೂರು ಗಂಡು ಮತ್ತು ಎರಡು ಹೆಣ್ಣು. 

ಈ ವರ್ಷ, ಅರಣ್ಯ ಇಲಾಖೆ, ಪಶುವೈದ್ಯರು ಮತ್ತು ಮೈಸೂರು ಜಿಲ್ಲಾಡಳಿತದ ಅಧಿಕಾರಿಗಳು ಆನೆ ಶಿಬಿರಗಳಿಗೆ ಹೋಗಿ ಕೋವಿಡ್ ಪರೀಕ್ಷೆ ಮಾಡಲು ನಿರ್ಧರಿಸಿದ್ದಾರೆ.

"ಪಶುವೈದ್ಯರ ನೇತೃತ್ವದ ತಂಡವು ಮೈಸೂರು ಮತ್ತು ಕೊಡಗು ಆನೆ ಶಿಬಿರಗಳಿಗೆ ಹೋಗಿ, ಈ ಐದು ಆನೆಗಳ ಆರೋಗ್ಯವನ್ನು ಪರಿಶೀಲಿಸುತ್ತದೆ. ಒಮ್ಮೆ ಅವುಗಳ ವೈದ್ಯಕೀಯ ವರದಿ ಸಾಮಾನ್ಯವಾಗಿದ್ದರೆ ಮತ್ತು ಅವುಗಳ ಕೋವಿಡ್ ಪರೀಕ್ಷಾ ವರದಿ ನೆಗಟಿವ್ ಬಂದ ನಂತರ ದಸರಾ ಆಚರಣೆಯಲ್ಲಿ ಭಾಗವಹಿಸುವ ಆನೆಗಳ ಅಂತಿಮ ಪಟ್ಟಿಯನ್ನು ತಯಾರಿಸಲಾಗುತ್ತದೆ ಎಂದು ಹಿರಿಯ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT