ವಿ.ಸುನೀಲ್ ಕುಮಾರ್ 
ರಾಜ್ಯ

ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ ಮಾಡೊಲ್ಲ: ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ

ರಾಜ್ಯದಲ್ಲಿ ರೈತರು ಕೃಷಿ ಉದ್ದೇಶಕ್ಕಾಗಿ ಬಳಸುವ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಲಾಗುತ್ತದೆ ಎಂಬ ಬಗ್ಗೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದು, ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ಚಿಂತನೆ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ರೈತರು ಕೃಷಿ ಉದ್ದೇಶಕ್ಕಾಗಿ ಬಳಸುವ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಲಾಗುತ್ತದೆ ಎಂಬ ಬಗ್ಗೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದು, ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ಚಿಂತನೆ ಇಲ್ಲ ಎಂದು ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ತಮ್ಮ ಕಚೇರಿಯ ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಪ್‌ಸೆಟ್ ಬಳಕೆಗೆ ಮೀಟರ್ ಅಳವಡಿಸುವ ಕುರಿತಾದ ಊಹಾಪೋಹಗಳನ್ನು ರೈತರು ನಂಬಬಾರದು ಎಂದು ಹೇಳಿದ್ದಾರೆ.

ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವ ಸಂಬಂಧ, ಈಗಾಗಲೇ ಅಧಿಕಾರಿಗಳ ಸಭೆ ಕರೆದು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ. ಇಂಧನ ಇಲಾಖೆ ಆಳ ಮತ್ತು ಅಗಲಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ. ಇಲಾಖೆಯನ್ನು ಜನಸ್ನೇಹಿಯನ್ನಾಗಿಸುವುದು ನಮ್ಮ ಮುಂದೆ ಇರುವ ಸವಾಲು ಎಂದು ತಿಳಿಸಿದ್ದಾರೆ.

ಲೈನ್‌ಮನ್‌ಗಳಿಂದ ವ್ಯವಸ್ಥಾಪಕ ನಿರ್ದೇಶಕರವರೆಗೆ ವಿವಿಧ ಹಂತಗಳ ಸಿಬ್ಬಂದಿ ಇಲಾಖೆಯಲ್ಲಿದ್ದಾರೆ. ಎಲ್ಲ ಹಂತಗಳಲ್ಲಿಯೂ ಸುಧಾರಣೆ ತರುವ ಮೂಲಕ ಇಲಾಖೆಯನ್ನು ಕ್ರಿಯಾಶೀಲಗೊಳಿಸುವ ಬಗ್ಗೆ ಆಲೋಚನೆ ನಡೆಸಿದ್ದೇನೆ. ಈ ವಿಚಾರವಾಗಿ ಅಧಿಕಾರಿಗಳ ಜತೆ ಎರಡು ಸುತ್ತಿನ ಸಬೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್