ರಾಕ್ ಲೈನ್ ವೆಂಕಟೇಶ್ 
ರಾಜ್ಯ

ಬಿಬಿಎಂಪಿಗೆ ರಾಕ್‌ಲೈನ್ ವೆಂಕಟೇಶ್ ಕೋಟ್ಯಂತರ ರು. ತೆರಿಗೆ ವಂಚನೆ: ಎನ್.ಆರ್. ರಮೇಶ್ ಆರೋಪ

ರಾಕ್‌ಲೈನ್‌ ಮಾಲ್‌ನ ಮಾಲೀಕ ರಾಕ್‌ಲೈನ್‌ ವೆಂಕಟೇಶ್‌ ಮತ್ತು ಪದ್ಮಕುಮಾರಿ ಅವರು ಬಿಬಿಎಂಪಿಗೆ 8.5 ಕೋಟಿ ರು. ಅಧಿಕ ಮೊತ್ತದ ತೆರಿಗೆ ವಂಚಿಸಿದ್ದಾರೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್‌ ಆರೋಪಿಸಿದ್ದಾರೆ. 

ಬೆಂಗಳೂರು: ರಾಕ್‌ಲೈನ್‌ ಮಾಲ್‌ನ ಮಾಲೀಕ ರಾಕ್‌ಲೈನ್‌ ವೆಂಕಟೇಶ್‌ ಮತ್ತು ಪದ್ಮಕುಮಾರಿ ಅವರು ಬಿಬಿಎಂಪಿಗೆ 8.5 ಕೋಟಿ ರು. ಅಧಿಕ ಮೊತ್ತದ ತೆರಿಗೆ ವಂಚಿಸಿದ್ದಾರೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್‌ ಆರೋಪಿಸಿದ್ದಾರೆ. 

ಬಿಬಿಎಂಪಿಯ ದಾಸರಹಳ್ಳಿ ವಲಯದ ವ್ಯಾಪ್ತಿಯಲ್ಲಿರುವ ರಾಕ್‌ಲೈನ್‌ ಮಾಲ್‌ ಕೇವಲ 48,500 ಚದರ ಅಡಿ ವಿಸ್ತೀರ್ಣ ಇದೆ ಎಂದು ಬಿಬಿಎಂಪಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಆರು ಮಹಡಿ ಸೇರಿದಂತೆ 1,22,743 ಚದರ ಅಡಿ ವಿಸ್ತಾರದಲ್ಲಿ ಈ ಮಾಲ್ ನಿರ್ಮಾಣಗೊಂಡಿದೆ ಎಂದು ಅವರು ದೂರಿದರು.

ಪಾಲಿಕೆಗೆ ಬೃಹತ್‌ ಮೊತ್ತದ ತೆರಿಗೆ ವಂಚಿಸಿರುವ ಬಗ್ಗೆ ಮಹಾಲೆಕ್ಕಪರಿಶೋಧಕರ ಕಚೇರಿಯ ಅಧಿಕಾರಿಗಳು ಮತ್ತು ದಾಸರಹಳ್ಳಿ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳು ನಡೆಸಿದ ಜಂಟಿ ಸಮೀಕ್ಷೆ ಕಾರ್ಯದಲ್ಲಿ ತಿಳಿದು ಬಂದಿದೆ. 74,243 ಚದರ ಅಡಿ ವಿಸ್ತೀರ್ಣವನ್ನು ಮುಚ್ಚಿಟ್ಟು, ಪಾಲಿಕೆಗೆ ತೆರಿಗೆ ವಂಚಿಸಲಾಗಿದೆ’ ಎಂದು ಹೇಳಿದರು.

2012ರ ಅ.25ರಂದು ರು 3.78 ಲಕ್ಷ ಮಾತ್ರ ತೆರಿಗೆ ಪಾವತಿಸಿದ್ದಾರೆ. ಬಡ್ಡಿ ಸೇರಿದಂತೆ 2.63 ಕೋಟಿ ಪಾವತಿಸುವಂತೆ 2015ರಲ್ಲಿಯೇ ಬಿಬಿಎಂಪಿಯು ರಾಕ್‌ಲೈನ್‌ ವೆಂಕಟೇಶ್‌ ಅವರಿಗೆ ನೋಟಿಸ್ ನೀಡಿತ್ತು. ಆದರೆ, ಪಾಲಿಕೆಯು ನೀಡಿದ್ದ ನೋಟಿಸ್‌ಗಳನ್ನು ಪ್ರಶ್ನಿಸಿ, ಅವರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದರು. ಆದರೆ, ನ್ಯಾಯಾಲಯ ಈ ಅರ್ಜಿಯನ್ನು ವಜಾಗೊಳಿಸಿದೆ’ ಎಂದರು. 

‘2011–12ರಿಂದ 2020–21ರವರೆಗಿನ ಅವಧಿಯವರೆಗೆ ಒಟ್ಟು 3.8 ಕೋಟಿ ರು ಆಸ್ತಿ ತೆರಿಗೆ, ವಾರ್ಷಿಕ ಬಡ್ಡಿದರ, ದಂಡ ಸೇರಿ,  ಒಟ್ಟು 8.51 ಕೋಟಿ  ತೆರಿಗೆ ಪಾವತಿಸಬೇಕಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT