ರಾಕ್ ಲೈನ್ ವೆಂಕಟೇಶ್ 
ರಾಜ್ಯ

ಬಿಬಿಎಂಪಿಗೆ ರಾಕ್‌ಲೈನ್ ವೆಂಕಟೇಶ್ ಕೋಟ್ಯಂತರ ರು. ತೆರಿಗೆ ವಂಚನೆ: ಎನ್.ಆರ್. ರಮೇಶ್ ಆರೋಪ

ರಾಕ್‌ಲೈನ್‌ ಮಾಲ್‌ನ ಮಾಲೀಕ ರಾಕ್‌ಲೈನ್‌ ವೆಂಕಟೇಶ್‌ ಮತ್ತು ಪದ್ಮಕುಮಾರಿ ಅವರು ಬಿಬಿಎಂಪಿಗೆ 8.5 ಕೋಟಿ ರು. ಅಧಿಕ ಮೊತ್ತದ ತೆರಿಗೆ ವಂಚಿಸಿದ್ದಾರೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್‌ ಆರೋಪಿಸಿದ್ದಾರೆ. 

ಬೆಂಗಳೂರು: ರಾಕ್‌ಲೈನ್‌ ಮಾಲ್‌ನ ಮಾಲೀಕ ರಾಕ್‌ಲೈನ್‌ ವೆಂಕಟೇಶ್‌ ಮತ್ತು ಪದ್ಮಕುಮಾರಿ ಅವರು ಬಿಬಿಎಂಪಿಗೆ 8.5 ಕೋಟಿ ರು. ಅಧಿಕ ಮೊತ್ತದ ತೆರಿಗೆ ವಂಚಿಸಿದ್ದಾರೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್‌ ಆರೋಪಿಸಿದ್ದಾರೆ. 

ಬಿಬಿಎಂಪಿಯ ದಾಸರಹಳ್ಳಿ ವಲಯದ ವ್ಯಾಪ್ತಿಯಲ್ಲಿರುವ ರಾಕ್‌ಲೈನ್‌ ಮಾಲ್‌ ಕೇವಲ 48,500 ಚದರ ಅಡಿ ವಿಸ್ತೀರ್ಣ ಇದೆ ಎಂದು ಬಿಬಿಎಂಪಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಆರು ಮಹಡಿ ಸೇರಿದಂತೆ 1,22,743 ಚದರ ಅಡಿ ವಿಸ್ತಾರದಲ್ಲಿ ಈ ಮಾಲ್ ನಿರ್ಮಾಣಗೊಂಡಿದೆ ಎಂದು ಅವರು ದೂರಿದರು.

ಪಾಲಿಕೆಗೆ ಬೃಹತ್‌ ಮೊತ್ತದ ತೆರಿಗೆ ವಂಚಿಸಿರುವ ಬಗ್ಗೆ ಮಹಾಲೆಕ್ಕಪರಿಶೋಧಕರ ಕಚೇರಿಯ ಅಧಿಕಾರಿಗಳು ಮತ್ತು ದಾಸರಹಳ್ಳಿ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳು ನಡೆಸಿದ ಜಂಟಿ ಸಮೀಕ್ಷೆ ಕಾರ್ಯದಲ್ಲಿ ತಿಳಿದು ಬಂದಿದೆ. 74,243 ಚದರ ಅಡಿ ವಿಸ್ತೀರ್ಣವನ್ನು ಮುಚ್ಚಿಟ್ಟು, ಪಾಲಿಕೆಗೆ ತೆರಿಗೆ ವಂಚಿಸಲಾಗಿದೆ’ ಎಂದು ಹೇಳಿದರು.

2012ರ ಅ.25ರಂದು ರು 3.78 ಲಕ್ಷ ಮಾತ್ರ ತೆರಿಗೆ ಪಾವತಿಸಿದ್ದಾರೆ. ಬಡ್ಡಿ ಸೇರಿದಂತೆ 2.63 ಕೋಟಿ ಪಾವತಿಸುವಂತೆ 2015ರಲ್ಲಿಯೇ ಬಿಬಿಎಂಪಿಯು ರಾಕ್‌ಲೈನ್‌ ವೆಂಕಟೇಶ್‌ ಅವರಿಗೆ ನೋಟಿಸ್ ನೀಡಿತ್ತು. ಆದರೆ, ಪಾಲಿಕೆಯು ನೀಡಿದ್ದ ನೋಟಿಸ್‌ಗಳನ್ನು ಪ್ರಶ್ನಿಸಿ, ಅವರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದರು. ಆದರೆ, ನ್ಯಾಯಾಲಯ ಈ ಅರ್ಜಿಯನ್ನು ವಜಾಗೊಳಿಸಿದೆ’ ಎಂದರು. 

‘2011–12ರಿಂದ 2020–21ರವರೆಗಿನ ಅವಧಿಯವರೆಗೆ ಒಟ್ಟು 3.8 ಕೋಟಿ ರು ಆಸ್ತಿ ತೆರಿಗೆ, ವಾರ್ಷಿಕ ಬಡ್ಡಿದರ, ದಂಡ ಸೇರಿ,  ಒಟ್ಟು 8.51 ಕೋಟಿ  ತೆರಿಗೆ ಪಾವತಿಸಬೇಕಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT