ಶಶಿಕಲಾ ಜೊಲ್ಲೆ 
ರಾಜ್ಯ

ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆಯಿಂದ ಧ್ವಜಾರೋಹಣ ಬೇಡ: ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ

ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆ ಶಶಿಕಲಾ ಜೊಲ್ಲೆಯವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಬಾರದು ಎಂದು ಆಗ್ರಹಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು. 

ವಿಜಯಪುರ: ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆ ಶಶಿಕಲಾ ಜೊಲ್ಲೆಯವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಬಾರದು ಎಂದು ಆಗ್ರಹಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು. 

ಜಿಲ್ಲಾಡಳಿತ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಘಟನೆ ನಡೆದಿದೆ.

ಧ್ವಜಾರೋಹಣಕ್ಕೆ ಸಚಿವೆ ಜೊಲ್ಲೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯರು ಘೇರಾವ್ ಹಾಕಿ, ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವೆ ವಿಜಯಪುರ ಜಿಲ್ಲೆಗೆ ಬೇಡವೆಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಕ್ಕಳಿಗೆ ನೀಡುವ ಮೊಟ್ಟೆಯ ವಿಚಾರದಲ್ಲಿ ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಯಬೇಕು. ಇಂತಹ ಭ್ರಷ್ಟರಿಗೆ ಧ್ವಜಾರೋಹಣ ಮಾಡುವ ಯೋಗ್ಯತೆ ಇಲ್ಲ. ಇದು ಅವಮಾನಕರ ಎಂದು ಘೋಷಣೆಗಳನ್ನು ಕೂಗಿದರು. ಜೊಲ್ಲೆ ಅವರು ಧ್ವಜಾರೋಹಣ ನಡೆಸುವುದಕ್ಕೆ ಅಡ್ಡಿಪಡಿಸಲು ಮುಂದಾದರು.

ಈ ವೇಳೆ ಕೂಡೇ ಕಾರ್ಯಪ್ರವೃತ್ತರಾದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ‌ ಪಡೆದು, ಬಂಧಿಸಿ ಠಾಣೆಗೆ ಕರೆದೊಯ್ದರು.

ಮೊಟ್ಟೆ ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿರುವ ಸಚಿವೆ ಶಶಿಕಲಾ‌ ಜೊಲ್ಲೆ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡುವುದನ್ನು ವಿರೋಧಿಸಿ‌ ಪ್ರತಿಭಟನೆಗೆ ಮುಂದಾದ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ‌ ಪದಾಧಿಕಾರಿಗಳನ್ನು ಪೊಲೀಸರು‌ ಬಂಧಿಸಿದ‌ ಘಟನೆ ವಿಜಯಪುರ ಅಕ್ಕಮಹಾದೇವಿ ವಿಶ್ವವಿದ್ಯಾಲದಲ್ಲಿ ಭಾನುವಾರ ಬೆಳಗ್ಗೆ‌ ನಡೆಯಿತು.

ಬಳಿಕ ಇತ್ತ ಬಿಗಿ‌ ಪೊಲೀಸ್ ಬಂದೋಬಸ್ತ್ ನಲ್ಲಿ ಶಶಿಕಲಾ‌ ಜೊಲ್ಲೆ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT