ಐಐಎಸ್ ಸಿ 
ರಾಜ್ಯ

'ಅಂಶಿ ಘಾಟ್' ಪುನಃ ತೆರೆಯಲು ಬೆಂಗಳೂರಿನ ಐಐಎಸ್ ಸಿ ಸಹಾಯ ಕೋರಿದ ಉತ್ತರ ಕನ್ನಡ ಜಿಲ್ಲಾಡಳಿತ

ಭಾರೀ ಭೂಕುಸಿತದಿಂದಾಗಿ ನಿರ್ಬಂಧಿಸಲಾಗಿರುವ ಅಂಶಿ ಘಾಟ್ ತೆರೆಯಲು ಮಾರ್ಗಗಳನ್ನು ಕಂಡುಕೊಳ್ಳಲು ಉತ್ತರ ಕನ್ನಡ ಜಿಲ್ಲಾಡಳಿತವು ಭಾರತೀಯ  ವಿಜ್ಞಾನ ಸಂಸ್ಥೆಯ ತಜ್ಞರ ಸಹಾಯ ಪಡೆಯುತ್ತಿದೆ.

ಕಾರವಾರ: ಭಾರೀ ಭೂಕುಸಿತದಿಂದಾಗಿ ನಿರ್ಬಂಧಿಸಲಾಗಿರುವ ಅಂಶಿ ಘಾಟ್ ತೆರೆಯಲು ಮಾರ್ಗಗಳನ್ನು ಕಂಡುಕೊಳ್ಳಲು ಉತ್ತರ ಕನ್ನಡ ಜಿಲ್ಲಾಡಳಿತವು ಭಾರತೀಯ  ವಿಜ್ಞಾನ ಸಂಸ್ಥೆಯ ತಜ್ಞರ ಸಹಾಯ ಪಡೆಯುತ್ತಿದೆ.

ಉತ್ತರ ಕನ್ನಡವು ಧಾರವಾಡ ಮತ್ತು ಬೆಳಗಾವಿಯೊಂದಿಗೆ ನೇರ ಸಂಪರ್ಕವನ್ನು ಕಳೆದುಕೊಂಡಿದೆ, ಹೀಗಾಗಿ ಜಿಲ್ಲಾಡಳಿತವು ಘಾಟ್ ಅನ್ನು ಮತ್ತೆ ತೆರೆಯಲು ತಜ್ಞರ ಸಹಾಯವನ್ನು ಅವಲಂಬಿಸಿದೆ.

ಪ್ರಾಕೃತಿಕ ವಿಕೋಪವು ಜಿಲ್ಲೆಗೆ ತೀವ್ರ ಹೊಡೆತ ನೀಡಿದೆ. ಬಹುತೇಕ ಎಲ್ಲಾ ಸೇತುವೆಗಳು, ರಸ್ತೆಗಳು ಮತ್ತು ಘಾಟ್‌ಗಳ ಮೇಲೆ ಪರಿಣಾಮ ಬೀರಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

"ಅರ್ಬೈಲ್ ಘಾಟ್ ಹೊರತುಪಡಿಸಿ, ಬೇರೆ ಯಾವುದೇ ಘಾಟ್‌ಗಳನ್ನು ಈ ಸಮಯದಲ್ಲಿ ಸುರಕ್ಷಿತವೆಂದು ಪರಿಗಣಿಸಲಾಗಿಲ್ಲ. ಜೋಯಿಡಾವನ್ನು ಕಾರವಾರದೊಂದಿಗೆ ಸಂಪರ್ಕಿಸುವ ಅಂಶಿ ಘಾಟ್ ಅನ್ನು ನಿರ್ಬಂಧಿಸಲಾಗಿದೆ. ಅದು ಯಾವಾಗ ಮತ್ತೆ ತೆರೆಯುತ್ತದೆ ಎಂದು ನಮಗೆ ಖಚಿತವಿಲ್ಲ" ಎಂದು ಸಚಿವರು ಹೇಳಿದರು.

ಐಐಎಸ್ ಸಿಯಿಂದ ತಜ್ಞರ ತಂಡ ಉತ್ತರ ಕನ್ನಡಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅಧ್ಯಯನ ಮಾಡಲಿದೆ. ಅವರು ಬಂದ ನಂತರ, ನಾವು ಎಸ್ಟಿಮೇಟ್ ಕಳುಹಿಸುತ್ತೇವೆ ಮತ್ತು ಯೋಜನೆಗೆ ಅನುಮೋದಿಸುತ್ತೇವೆ ಎಂದು ಅವರು ಹೇಳಿದರು. 

ಹಾನಿಗೊಳಗಾದ ಪ್ರದೇಶಗಳು ಮತ್ತು ಕದ್ರಾ ಮತ್ತು ಇತರ ಸ್ಥಳಗಳಲ್ಲಿನ ಪ್ರವಾಹ ಪರಿಸ್ಥಿತಿ ಕುರಿತು ಪ್ರಸ್ತಾಪಿಸಿದ ಹೆಬ್ಬಾರ್, ಇಂಧನ ಸಚಿವ ಕೆ. ಸುನೀಲ್ ಕುಮಾರ್ ಜಿಲ್ಲೆಗೆ ಭೇಟಿ ನೀಡಲಿದ್ದು, ಪ್ರವಾಹದಿಂದ ಉಂಟಾದ ಹಾನಿಯ ಮೌಲ್ಯಮಾಪನ ಮಾಡಲಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT