ಸಾಂದರ್ಭಿಕ ಚಿತ್ರ 
ರಾಜ್ಯ

ಸಾಂತ್ವನ ಕೇಂದ್ರದಿಂದ ಐವರು ವಿದೇಶಿ ಮಹಿಳಾ ಕೈದಿಗಳು ಪರಾರಿ

ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲ್ಪಟ್ಟಿದ್ದ ಐವರು ವಿದೇಶಿ ಮಹಿಳಾ ಕೈದಿಗಳು ಸಿಬ್ಬಂದಿಗಳ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಾರಿಯಾಗಿರುವ ಕೈದಿಗಳು ಆಫ್ರಿಕಾದ ಕಾಂಗೊ, ನೈಜೀರಿಯ ದೇಶದವರಾಗಿದ್ದಾರೆ.

ಬೆಂಗಳೂರು: ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲ್ಪಟ್ಟಿದ್ದ ಐವರು ವಿದೇಶಿ ಮಹಿಳಾ ಕೈದಿಗಳು ಸಿಬ್ಬಂದಿಗಳ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಾರಿಯಾಗಿರುವ ಕೈದಿಗಳು ಆಫ್ರಿಕಾದ ಕಾಂಗೊ, ನೈಜೀರಿಯ ದೇಶದವರಾಗಿದ್ದಾರೆ. ಪೂರ್ವ ವಿಭಾಗದ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಒಟ್ಟು 15 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಅವರಲ್ಲಿ ಐವರು ವಿದೇಶಿ ಮಹಿಳೆಯರೂ ಸೇರಿದ್ದರು. ಅವರ ವಿರುದ್ಧ ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಮಹಿಳೆಯರನ್ನು ಅವರ ದೇಶಕ್ಕೆ ಕಳುಹಿಸುವ ಬಗ್ಗೆ ಪೊಲೀಸರು ಅವರ ದೇಶದ ರಾಜತಾಂತ್ರಿಕ ಕಚೇರಿ ಜೊತೆ ಮಾತುಕತೆ ನಡೆಸಿದ್ದರು. ಅದರ ನಡುವೆಯೇ ಮಹಿಳೆಯರು ಪರಾರಿಯಾಗಿದ್ದಾರೆ. 

ಸಿಬ್ಬಂದಿ ಜೊತೆ ನೀರು ಬೇಕೆಂದು ಕೇಳಿದ್ದರು. ನೀರು ತರಲು ಸಿಬ್ಬಂದಿ ಒಳಕ್ಕೆ ಹೋದ ಸಮಯದಲ್ಲಿ ೬ ಮಂದಿ ವಿದೇಶಿ ಮಹಿಳೆಯರು ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾರೆ. ಗೋಡೆ ಹಾರುವ ಸಮಯದಲ್ಲಿ ಓರ್ವ ಮಹಿಳೆ ಕೆಳಕ್ಕೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಉಳಿದ ಐವರು ಮಹಿಳೆಯರು ಪರಾರಿಯಾಗುವುದರಲ್ಲಿ ಯಶಸ್ವಿಯಾಗಿದ್ದಾರೆ. ಹಿಂದುಳಿದ ಗಾಯಾಳು ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. 

ಪರಾರಿಯಾಗಿರುವ ಮಹಿಳೆಯರ ಭಾವಚಿತ್ರಗಳನ್ನು ಏರ್ ಪೋರ್ಟ್, ರೈಲ್ವೇ ನಿಲ್ದಾಣ ಹಾಗೂ ಬಸ್ ನಿಲ್ದಾಣ ಅಧಿಕಾರಿಗಳ ಬಳಿ ಹಂಚಿಕೊಳ್ಳಲಾಗಿದೆ ಎಂದು ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!