ನಿನ್ನೆ ಅಫ್ಘಾನಿಸ್ತಾನದಿಂದ ಬಂದಿಳಿದ ಭಾರತೀಯರನ್ನು ಗುಜರಾತ್ ನ ಜಮ್ನಗರದಲ್ಲಿ ಸ್ವಾಗತಿಸಿದ ಅಧಿಕಾರಿಗಳು 
ರಾಜ್ಯ

ಅಫ್ಘಾನಿಸ್ತಾನದಲ್ಲಿ ಸಿಕ್ಕಿಹಾಕಿಕೊಂಡಿರುವ ಕರ್ನಾಟಕ ಮೂಲದ ಇಬ್ಬರು ಪಾದ್ರಿಗಳು: ನೆರವಿಗೆ ಕುಟುಂಬಸ್ಥರ ಮೊರೆ  

ನಗರದ ಬಳಿಯ ಸಿದ್ದಕಟ್ಟೆಯ ಫಾದರ್ ಜೆರೊಮೆ ಸಿಕ್ವೆರಾ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಫಾದರ್ ಪಿ ರಾಬರ್ಟ್ ರೋಡ್ರಿಗಸ್ ಎಂಬ ಇಬ್ಬರು ಜೆಸ್ಯೂಟ್ ಪಾದ್ರಿಗಳು ಅಫ್ಘಾನಿಸ್ತಾನದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ.

ಮಂಗಳೂರು: ನಗರದ ಬಳಿಯ ಸಿದ್ದಕಟ್ಟೆಯ ಫಾದರ್ ಜೆರೊಮೆ ಸಿಕ್ವೆರಾ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಫಾದರ್ ಪಿ ರಾಬರ್ಟ್ ರೋಡ್ರಿಗಸ್ ಎಂಬ ಇಬ್ಬರು ಜೆಸ್ಯೂಟ್ ಪಾದ್ರಿಗಳು ಅಫ್ಘಾನಿಸ್ತಾನದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ.
ಫಾದರ್ ಜೆರೊಮೆಯವರು ನಿನ್ನೆ ಸಂದೇಶ ಮೂಲಕ ಸಂಪರ್ಕಕ್ಕೆ ಸಿಕ್ಕಿ ತಾವು ಸುರಕ್ಷಿತವಾಗಿದ್ದೇವೆ ಎಂದು ಹೇಳಿದ್ದಾರೆ. ಆದರೆ ಅವರ ಕುಟುಂಬಸ್ಥರು ಅಲ್ಲಿನ ಪರಿಸ್ಥಿತಿ ಕಂಡು ಗಾಬರಿಯಾಗಿದ್ದಾರೆ. 

ಫಾ. ಜೆರೋಮ್ ಸಿಕ್ವೇರಾ ಅವರು ಕಳೆದ ಜನವರಿಯಿಂದ ಕಾಬೂಲ್‌ನಲ್ಲಿರುವ ಅಂತಾರಾಷ್ಟ್ರೀಯ ಎನ್ಜಿಒ ಜೆಸ್ಯೂಟ್ ರೆಫ್ಯೂಜಿ ಸರ್ವಿಸಸ್ (ಜೆಆರ್‌ಎಸ್) ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಮೊನ್ನೆ ಮಂಗಳವಾರ ಬೆಳಿಗ್ಗೆ ತಮ್ಮ ಸಹೋದರ ವಿನ್ಸೆಂಟ್ ಸಿಕ್ವೇರಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು ಕಾಬೂಲ್ ಬಳಿಯ ಸ್ಥಳದಲ್ಲಿ ಉಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ವಿನ್ಸೆಂಟ್ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿ, ತಾವು ವಿದೇಶಾಂಗ ಇಲಾಖೆ ಅಧಿಕಾರಿಗಳು ಮತ್ತು ಅಫ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರುವ ಕುಲಶೇಖರ್ ಮೂಲದ ಜೆಸ್ಯೂಟ್ಸ್ ಪ್ರಾಂತೀಯ ಫ್ರಾ. ಜೆರೋಮ್ ಕುಟಿನ್ಹಾ ಅವರನ್ನು ಸಂಪರ್ಕಿಸಿರುವುದಾಗಿ ಹೇಳಿದ್ದಾರೆ. ನನ್ನ ಜೊತೆ ಕೇವಲ ಒಂದು ನಿಮಿಷ ಮಾತ್ರ ಮಾತನಾಡಿದ್ದಾರೆ, ಸದ್ಯ ಅಲ್ಲಿ ಪರಿಸ್ಥಿತಿ ಅಸ್ತವ್ಯಸ್ತವಾಗಿರುವುದರಿಂದ ಕರೆ ಸಂಪರ್ಕ ಕಡಿತಗೊಳಿಸಿದರು ಎಂದು ತಿಳಿಸಿದ್ದಾರೆ.

ತೀರ್ಥಹಳ್ಳಿಯವರಾದ ಫಾ.ರಾಬರ್ಟ್ ಮಧ್ಯ ಅಫ್ಘಾನಿಸ್ತಾನದ ಬಾಮಿಯಾನ್ ಪ್ರಾಂತ್ಯದ ರಾಜಧಾನಿಯಾದ ಬಾಮಿಯಾನ್‌ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮೊದಲು, ಕಾಬೂಲ್ ಮತ್ತು ಅಫ್ಘಾನಿಸ್ತಾನದ ಇತರ ಭಾಗಗಳಿಂದ ಹೊರಹೊಮ್ಮುವ ಭಯಾನಕ ದೃಶ್ಯಗಳನ್ನು ಮತ್ತು ದೇಶದ ಪರಿಸ್ಥಿತಿ ಹೇಗೆ ವೇಗವಾಗಿ ಬದಲಾಗುತ್ತಿದೆ ಎಂಬುದನ್ನು ಫ್ರಾನ್ ಜೆರೋಮ್ ವಿವರಿಸಿದ್ದಾರೆ. "ನಾವು ಮತ್ತು ನಮ್ಮ ಸಿಬ್ಬಂದಿ ಸುರಕ್ಷಿತವಾಗಿದ್ದೇವೆ. ಇಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ವಿವರಿಸಿದ್ದಾರೆ ಎಂದರು.

ಕಳೆದ ಭಾನುವಾರ ಬೆಳಿಗ್ಗೆ ಕಾಬೂಲ್ ವಿಮಾನ ನಿಲ್ದಾಣವನ್ನು ತಲುಪಲು ಅವರಿಗೆ ಸಾಧ್ಯವಾಯಿತಾದರೂ ಆ ಹೊತ್ತಿಗೆ ತಾಲಿಬಾನಿಯರು ವಿಮಾನ ನಿಲ್ದಾಣವನ್ನು ವಶಪಡಿಸಿಕೊಂಡರು. "ನಾನು ನನ್ನ ಸಾಮಾನುಗಳನ್ನು ದೊಡ್ಡ ಜನಸಂದಣಿ ಮತ್ತು ರಸ್ತೆಯ ವಾಹನಗಳ ಮೂಲಕ ಎಳೆಯಬೇಕಾಯಿತು. ಸಾವಿರಾರು ಜನರು ಪಲಾಯನ ಮಾಡಲು ಪ್ರಯತ್ನಿಸಿದರು. ತಾಲಿಬಾನಿಯರು ಗಾಳಿಯಲ್ಲಿ ಗುಂಡು ಹಾರಿಸುತ್ತಾ ಗುಂಪನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದರು. ಯಾವುದೇ ಭದ್ರತಾ ತಪಾಸಣೆ ಅಥವಾ ಬೋರ್ಡಿಂಗ್ ಪಾಸ್ ಇಲ್ಲದೆ ಜನರು ವಿಮಾನಗಳನ್ನು ಹತ್ತುತ್ತಿದ್ದರು. ಇದು ಭಯಾನಕ ಅನುಭವವಾಗಿತ್ತು ಎಂದು ಅವರು ವಿವರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT