ಸಂಗ್ರಹ ಚಿತ್ರ 
ರಾಜ್ಯ

ಲೋಕ ಅದಾಲತ್: ಒಂದೇ ದಿನ ದಾಖಲೆಯ 3.88 ಲಕ್ಷ ಪ್ರಕರಣಗಳು ಇತ್ಯರ್ಥ

ರಾಜ್ಯದಲ್ಲಿ ಆಗಸ್ಟ್ 14ರಂದು ನಡೆದ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟು 3.88 ಲಕ್ಷ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಪಡಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 14ರಂದು ನಡೆದ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟು 3.88 ಲಕ್ಷ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಪಡಿಸಲಾಗಿದೆ.

ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಪ್ರಕರಣಗಳನ್ನು ಇತ್ಯರ್ಥಪಡಿಸಿ, ರಾಷ್ಟ್ರೀಯ ದಾಖಲೆ ನಿರ್ಮಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹಿರಿಯ ನ್ಯಾಯಮೂರ್ತಿ ಅವರಿಂದ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. 

ಲೋಕ ಅದಾಲತ್ ನಲ್ಲಿ 79,207 ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಬಾಕಿಯಿದ್ದ 5,32,326 ಪ್ರಕರಣಗಳು ಸೇರಿ ಒಟ್ಟು 6,11,533 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಗುರಿತಿಸಲಾಗಿತ್ತು. 

ರಾಜ್ಯದಾದ್ಯಂತ ಲೋಕ ಅದಾಲತ್ ನಲ್ಲಿ 943 ಪೀಠಗಳು ಕಾರ್ಯನಿರ್ವಹಿಸಿ, 33,251 ವ್ಯಾಜ್ಯ ಪೂರ್ವ ಹಾಗೂ 3,55,730 ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಪ್ರಕರಣಗಳು ಸೇರಿ ಒಟ್ಟು 3,88,981 ಪ್ರಕರಣಗಳನ್ನು ಇತ್ಯರ್ಥಪಡಿಸಿವೆ. ಕಕ್ಷಿದಾರರಿಗೆ ಒಟ್ಟು 907,65,59,025 ರೂಪಾಯಿ ಪರಿಹಾರ ಕೊಡಿಸಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಮೆಗಾ ಲೋಕ ಅದಾಲತ್ ನಲ್ಲಿ ಸರ್ಕಾರಕ್ಕೆ ಒಟ್ಟು ರೂ.25,75,03,546 ದಂಡ ವಸೂಲಿ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್