ಸಾಂದರ್ಭಿಕ ಚಿತ್ರ 
ರಾಜ್ಯ

1 ರಿಂದ 8ನೇ ತರಗತಿ ಪ್ರಾರಂಭಕ್ಕೆ ಚಿಂತನೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಕೋವಿಡ್ ಕಾರ್ಯಪಡೆ, ಮಕ್ಕಳ ತಜ್ಞರು ಹಾಗೂ ತಾಂತ್ರಿಕ ಸಮಿತಿ ವರದಿ ಆಧರಿಸಿ 9, 10 ಹಾಗೂ ಪಿಯುಸಿ ತರಗತಿ ಆರಂಭಿಸಲಾಗುತ್ತಿದ್ದು, ಇದರಲ್ಲಿ ಯಶಸ್ವಿಯಾದರೇ ಮುಂದಿನ ದಿನಗಳಲ್ಲಿ 1 ರಿಂದ 8 ನೇ ತರಗತಿ...

ಚಿತ್ರದುರ್ಗ: ಕೋವಿಡ್ ಕಾರ್ಯಪಡೆ, ಮಕ್ಕಳ ತಜ್ಞರು ಹಾಗೂ ತಾಂತ್ರಿಕ ಸಮಿತಿ ವರದಿ ಆಧರಿಸಿ 9, 10 ಹಾಗೂ ಪಿಯುಸಿ ತರಗತಿ ಆರಂಭಿಸಲಾಗುತ್ತಿದ್ದು, ಇದರಲ್ಲಿ ಯಶಸ್ವಿಯಾದರೇ ಮುಂದಿನ ದಿನಗಳಲ್ಲಿ 1 ರಿಂದ 8 ನೇ ತರಗತಿ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬುಧವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಪೋಷಕರು ಹಾಗು ಮಕ್ಕಳ ಧೈರ್ಯ ನೋಡಿ ಶಾಲೆ ತೆರೆಯಲಾಗುತ್ತಿದೆ. ಈಗಾಗಲೇ ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಮಕ್ಕಳ ಮನವೊಲಿಸಲು ಶಿಕ್ಷಕರಿಗೆ ತಿಳಿಸಲಾಗಿದೆ ಎಂದರು.

ಇನ್ನು, ಯಾವುದೇ ಕಾರಣಕ್ಕೂ ಬಲವಂತವಾಗಿ ಮಕ್ಕಳನ್ನು ಶಾಲೆಗೆ ಕರೆತರುವಂತಿಲ್ಲ. ಒಂದು ಪೋಷಕರು ಇದಕ್ಕೆ ಸಹಮತನೀಡದಿದ್ದರೇ, ಆನ್ ಲೈನ್ ತರಗತಿ ಮೂಲಕ ಅವರಿಗೆ ಅಭ್ಯಾಸ ಮುಂದುವರೆಯುವುದು. ಈ ಕುರಿತು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಎಂದರು.

ತರಗತಿಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಒಂದು ವೇಳೆ ಕೋವಿಡ್ ದೃಢಪಟ್ಟರೇ ಒಂದು ವಾರಗಳ ಕಾಲ ಶಾಲೆ ಮುಚ್ಚಲಾಗುವುದು. ನಂತರ ಸಂಪೂರ್ಣ ಸ್ಯಾನಿಟೈಸ್ ಮಾಡಿ ಮತ್ತೆ ಶಾಲೆ ಆರಂಭಿಸಲಾಗುವುದು. ಶೇ.30 ರಿಂದ 40 ರಷ್ಟು ಮಕ್ಕಳು ಆನ್ ಲೈನ್ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT