ಸಾಂದರ್ಭಿಕ ಚಿತ್ರ 
ರಾಜ್ಯ

1 ರಿಂದ 8ನೇ ತರಗತಿ ಪ್ರಾರಂಭಕ್ಕೆ ಚಿಂತನೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಕೋವಿಡ್ ಕಾರ್ಯಪಡೆ, ಮಕ್ಕಳ ತಜ್ಞರು ಹಾಗೂ ತಾಂತ್ರಿಕ ಸಮಿತಿ ವರದಿ ಆಧರಿಸಿ 9, 10 ಹಾಗೂ ಪಿಯುಸಿ ತರಗತಿ ಆರಂಭಿಸಲಾಗುತ್ತಿದ್ದು, ಇದರಲ್ಲಿ ಯಶಸ್ವಿಯಾದರೇ ಮುಂದಿನ ದಿನಗಳಲ್ಲಿ 1 ರಿಂದ 8 ನೇ ತರಗತಿ...

ಚಿತ್ರದುರ್ಗ: ಕೋವಿಡ್ ಕಾರ್ಯಪಡೆ, ಮಕ್ಕಳ ತಜ್ಞರು ಹಾಗೂ ತಾಂತ್ರಿಕ ಸಮಿತಿ ವರದಿ ಆಧರಿಸಿ 9, 10 ಹಾಗೂ ಪಿಯುಸಿ ತರಗತಿ ಆರಂಭಿಸಲಾಗುತ್ತಿದ್ದು, ಇದರಲ್ಲಿ ಯಶಸ್ವಿಯಾದರೇ ಮುಂದಿನ ದಿನಗಳಲ್ಲಿ 1 ರಿಂದ 8 ನೇ ತರಗತಿ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬುಧವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಪೋಷಕರು ಹಾಗು ಮಕ್ಕಳ ಧೈರ್ಯ ನೋಡಿ ಶಾಲೆ ತೆರೆಯಲಾಗುತ್ತಿದೆ. ಈಗಾಗಲೇ ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಮಕ್ಕಳ ಮನವೊಲಿಸಲು ಶಿಕ್ಷಕರಿಗೆ ತಿಳಿಸಲಾಗಿದೆ ಎಂದರು.

ಇನ್ನು, ಯಾವುದೇ ಕಾರಣಕ್ಕೂ ಬಲವಂತವಾಗಿ ಮಕ್ಕಳನ್ನು ಶಾಲೆಗೆ ಕರೆತರುವಂತಿಲ್ಲ. ಒಂದು ಪೋಷಕರು ಇದಕ್ಕೆ ಸಹಮತನೀಡದಿದ್ದರೇ, ಆನ್ ಲೈನ್ ತರಗತಿ ಮೂಲಕ ಅವರಿಗೆ ಅಭ್ಯಾಸ ಮುಂದುವರೆಯುವುದು. ಈ ಕುರಿತು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಎಂದರು.

ತರಗತಿಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಒಂದು ವೇಳೆ ಕೋವಿಡ್ ದೃಢಪಟ್ಟರೇ ಒಂದು ವಾರಗಳ ಕಾಲ ಶಾಲೆ ಮುಚ್ಚಲಾಗುವುದು. ನಂತರ ಸಂಪೂರ್ಣ ಸ್ಯಾನಿಟೈಸ್ ಮಾಡಿ ಮತ್ತೆ ಶಾಲೆ ಆರಂಭಿಸಲಾಗುವುದು. ಶೇ.30 ರಿಂದ 40 ರಷ್ಟು ಮಕ್ಕಳು ಆನ್ ಲೈನ್ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT