ಗಾಳಿಯಲ್ಲಿ ಗುಂಡು ಹಾರಿಸುತ್ತಿರುವುದು 
ರಾಜ್ಯ

ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವ ಭಗವಂತ ಖೂಬಾಗೆ ಸ್ವಾಗತ: ಕೇಸ್ ದಾಖಲು

ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವಾಗ ಗಾಳಿಯಲ್ಲಿ ಗುಂಡು ಹಾರಿಸಲಾಗಿದ್ದು, ಇದೀಗ ಈ ಘಟನೆ ಭಾರೀ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ.

ಯಾದಗಿರಿ: ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವಾಗ ಗಾಳಿಯಲ್ಲಿ ಗುಂಡು ಹಾರಿಸಲಾಗಿದ್ದು, ಇದೀಗ ಈ ಘಟನೆ ಭಾರೀ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ.

ಬಿಜೆಪಿ ಜನಾರ್ಶೀವಾದ ಯಾತ್ರೆ ಅಂಗವಾಗಿ ಜಿಲ್ಲೆಯ ಗಡಿ ಗ್ರಾಮ ಯರಗೋಳದಲ್ಲಿ ಸಚಿವರನ್ನು ಮೆರವಣಿಗೆ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದರು. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಭಾರೀ ವೈರಲ್ ಆಗಿದೆ.

ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೇಂದ್ರ ಸಚಿವ ಭಗವಂತ ಖೂಬಾಗೆ ಬಿಜೆಪಿಯಿಂದ ಸ್ವಾಗತ ಕೋರಲಾಗಿತ್ತು.  ಈ ವೇಳೆ ಅವರ ಬೆಂಬಲಿಗರೇ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಗಾಳಿಯಲ್ಲಿ ಗುಂಡು ಹಾರಿಸಲು ನಾಡ ಬಂದೂಕು ವ್ಯವಸ್ಥೆಯನ್ನು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ವಿಚಾರ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಬಾಬುರಾವ್ ಚಿಂಚನಸೂರ್ ಜನಾಶೀರ್ವಾದ ಯಾತ್ರೆಗೆ ಗೈರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ