ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನವಜಾತ ಶಿಶು ಮಾರಾಟ ಪ್ರಕರಣ, ಮೂವರ ಬಂಧನ

ನವಜಾತ ಶಿಶುವೊಂದರ ಮಾರಾಟ ಪ್ರಕರಣದಲ್ಲಿ ಮೂವರನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ತರನ್ನಂ ಬಾನು (38), ನಿಶಾತ್ ಕೌಸರ್ (45) ಮತ್ತು ಕೆ. ಸವುದ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ನವಜಾತ ಶಿಶುವೊಂದರ ಮಾರಾಟ ಪ್ರಕರಣದಲ್ಲಿ ಮೂವರನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ತರನ್ನಂ ಬಾನು (38), ನಿಶಾತ್ ಕೌಸರ್ (45) ಮತ್ತು ಕೆ. ಸವುದ್ ಎಂದು ಗುರುತಿಸಲಾಗಿದೆ. ಸೋಮವಾರ ಅಗಡಿ ಆಸ್ಪತ್ರೆ ಬಳಿ ಪುರುಷ ಹಾಗೂ ಮಹಿಳೆಯೊಬ್ಬರು ಜಗಳವಾಡುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ವಿಚಾರಿಸಲಾಗಿ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಪೊಲೀಸರು ಅವರಿಬ್ಬರನ್ನು ವಿಚಾರಣೆಗೊಳಪಡಿಸಲು ಯತ್ನಿಸಿದಾಗ ಪುರುಷ ಅಲ್ಲಿಂದ ಪರಾರಿಯಾಗಿದ್ದು, ಮಹಿಳೆಯನ್ನು ಬಂಧಿಸಲಾಗಿದೆ. ಆಡುಗೋಡಿ ನಿವಾಸಿ ತರನ್ನಂ ಬಾನು ಕೆಲವು ದಿನಗಳ ಹಿಂದೆ ಆಕೆಯ ಮನೆ ಕೆಲಸದಾಳು ಗಂಡು ಮಗುವಿಗೆ ಜನ್ಮ ನೀಡಿದ್ದು, ಅದನ್ನು ದೂರದ ಸಂಬಂಧಿಗೆ ಮಾರಾಟ ಮಾಡಿದ್ದಾಗಿ ತಿಳಿಸಿದ್ದಾಳೆ.

ಮಗುವಿನ ತಂದೆ ಮುಬಾರಕ್ ಪಾಶ ಮಗುವಿನ ಮಾರಾಟ ಮಾಡಲು ನಿರ್ಧರಿಸಿ ಬಾನು ಜೊತೆಗೆ ಪಾಲು ಕುದುರಿಸಿದ್ದಾನೆ. ತಾಯಿಯನ್ನು ಮನವೊಲಿಸಿದ ಬಳಿಕ ಮಗುವನ್ನು ಹೊರಗಡೆ ತಂದು ಬಾನುಗೆ ಹಸ್ತಾಂತರಿಸಿದ್ದಾನೆ. ಅದನ್ನು ಆಕೆ ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಿಲ್ಲದ ತನ್ನ ಸಂಬಂಧಿ ಸವೂದ್ ಅವರಿಗೆ ಮಾರಾಟ ಮಾಡಿದ್ದಾಗಿ ಪೊಲೀಸರು ಹೇಳಿದ್ದಾರೆ.

ಆ ಮಗುವಿಗೆ 1.30 ಲಕ್ಷ  ಕೊಡಲು ಒಪ್ಪಿದ ಸವುದ್,  ಮುಂಗಡವಾಗಿ 50 ಸಾವಿರ ರೂ. ಹಣವನ್ನು ಬಾನುಗೆ ಪಾವತಿಸಿದ್ದರು. ಆದರೆ, ಬಾನು ಈ ಹಣದಲ್ಲಿ ಪಾಶನಿಗೆ ಪಾಲು ನೀಡಿರಲಿಲ್ಲವಂತೆ. ಇದಕ್ಕಾಗಿ ಪಾಶ,  ಅಗಡಿ ಆಸ್ಪತ್ರೆ ಮುಂಭಾಗ ಬಾನು ಜೊತೆಗೆ ಜಗಳವಾಡುತ್ತಿದ್ದಾಗ ಆಕೆಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಾನು ನೀಡಿದ ಹೇಳಿಕೆ ಆಧಾರದ ಮೇಲೆ ಸಾವುದ್ ಮತ್ತು ಕೌಶರ್ ಅವರನ್ನು ಬಂಧಿಸಲಾಗಿದೆ. 38 ದಿನಗಳ ಗಂಡುಮಗುವನ್ನು ರಕ್ಷಿಸಿ ಆಕೆಯ ತಾಯಿ ಬಳಿಗೆ ಮತ್ತೆ ಸೇರಿಸಲಾಗಿದೆ. ಪಾಶನಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT