ಕಾಬೂಲ್ ನಗರದಲ್ಲಿ ತಾಲಿಬಾನ್ ಹೋರಾಟಗಾರ ಕಾವಲು ಕಾಯುತ್ತಿರುವುದು 
ರಾಜ್ಯ

ರಾಜ್ಯದಲ್ಲಿರುವ ಅಫ್ಘನ್ ಪ್ರಜೆಗಳ ಸುರಕ್ಷತೆಗೆ ಸರ್ಕಾರ ಬದ್ಧ: ಗೃಹ ಸಚಿವ ಆರಗ ಜ್ಞಾನೇಂದ್ರ 

ರಾಜ್ಯದಲ್ಲಿರುವ ಅಫ್ಘನ್ ಪ್ರಜೆಗಳ ಸುರಕ್ಷತೆಗೆ ಸರ್ಕಾರ ಕ್ರಮ ಕೈಗೊಳ್ಳಲಿದ್ದು ಅವರ ವೀಸಾ ಅವಧಿ ವಿಸ್ತರಣೆಗೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರು:ರಾಜ್ಯದಲ್ಲಿರುವ ಅಫ್ಘನ್ ಪ್ರಜೆಗಳ ಸುರಕ್ಷತೆಗೆ ಸರ್ಕಾರ ಕ್ರಮ ಕೈಗೊಳ್ಳಲಿದ್ದು ಅವರ ವೀಸಾ ಅವಧಿ ವಿಸ್ತರಣೆಗೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ 339 ಅಫ್ಘನ್ ಪ್ರಜೆಗಳಿದ್ದು ಅವರಲ್ಲಿ 192 ಮಂದಿ ವಿದ್ಯಾರ್ಥಿಗಳು. ಅವರಿಗೆ ಈಗ ತಮ್ಮ ಭವಿಷ್ಯದ ಬಗ್ಗೆ ಆತಂಕ ಶುರುವಾಗಿದೆ. ಮಾನವೀಯ ನೆಲೆಯಲ್ಲಿ ಅವರಿಗೆ ಸಾಧ್ಯವಾದ ಎಲ್ಲಾ ನೆರವನ್ನು ಸರ್ಕಾರ ಕಲ್ಪಿಸಲಿದೆ ಎಂದರು.

ತಮ್ಮ ವೀಸಾ ಅವಧಿ ಸದ್ಯದಲ್ಲಿಯೇ ಮುಗಿಯುವ ಬಗ್ಗೆ ಕೆಲವು ಅಫ್ಘನ್ನರು ಆತಂಕ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಅವರ ವೀಸಾ ಅವಧಿಯನ್ನು ವಿಸ್ತರಿಸುವ ಕುರಿತು ತೀರ್ಮಾನಿಸಿದ್ದು ರಾಜ್ಯದಲ್ಲಿನ ಅಫ್ಘನ್ ಪ್ರಜೆಗಳ ವೀಸಾ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ ಎಂದರು.

ಈ ಮಧ್ಯೆ ಅಫ್ಘಾನಿಸ್ತಾನದಲ್ಲಿರುವ ರಾಜ್ಯದ ಪ್ರಜೆಗಳನ್ನು ಸ್ಥಳಾಂತರಗೊಳಿಸಲು ವಿದೇಶಾಂಗ ಸಚಿವಾಲಯ ಜೊತೆ ಸಮನ್ವಯ ಸಾಧಿಸಲು ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿಯನ್ನು ನೇಮಿಸಿದೆ.

ಅಫ್ಘನ್ನರ ಸ್ಥಳಾಂತರಕ್ಕೆ ನೋಡಲ್ ಅಧಿಕಾರಿಗಳು: ನಿನ್ನೆ ಸರ್ಕಾರ ಬಿಡುಗಡೆ ಮಾಡಿದ ಅಧಿಸೂಚನೆಯಲ್ಲಿ, ಎಡಿಜಿಪಿ-ಸಿಐಡಿ ಉಮೇಶ್ ಕುಮಾರ್ ಅವರನ್ನು ಅಫಘಾನಿಸ್ತಾನದಲ್ಲಿ ಸಿಲುಕಿರುವ ಕರ್ನಾಟಕದಿಂದ ಜನರನ್ನು ಸುರಕ್ಷಿತ ಸ್ಥಳಾಂತರಕ್ಕಾಗಿ ಕೇಂದ್ರದೊಂದಿಗೆ ಸಮನ್ವಯಗೊಳಿಸಲು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಸರ್ಕಾರ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT