ವಿನಯ್ ಕುಲಕರ್ಣಿ 
ರಾಜ್ಯ

ಯೋಗೀಶ್ ಗೌಡ ಹತ್ಯೆ ಕೇಸು: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು, ಇಂದೇ ಬಿಡುಗಡೆ ಭಾಗ್ಯ?

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಯೋಗೀಶ್ ಗೌಡ ಹತ್ಯೆ ಕೇಸಿನಲ್ಲಿ ಜಾಮೀನು ಸಿಕ್ಕಿದ್ದು ವರಮಹಾಲಕ್ಷ್ಮಿ ದಿನ ಶುಕ್ರವಾರವೇ ಬೆಳಗಾವಿಯ ಹಿಂಡಲಗ ಜೈಲಿನಿಂದ ಬಿಡುಗಡೆ ಭಾಗ್ಯ ಅವರಿಗೆ ಸಿಗಲಿದೆಯೇ ಎಂಬ ಮಾತುಗಳು ಕೇಳಿಬರುತ್ತಿದೆ. 

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಯೋಗೀಶ್ ಗೌಡ ಹತ್ಯೆ ಕೇಸಿನಲ್ಲಿ ಜಾಮೀನು ಸಿಕ್ಕಿದ್ದು ವರಮಹಾಲಕ್ಷ್ಮಿ ದಿನ ಶುಕ್ರವಾರವೇ ಬೆಳಗಾವಿಯ ಹಿಂಡಲಗ ಜೈಲಿನಿಂದ ಬಿಡುಗಡೆ ಭಾಗ್ಯ ಅವರಿಗೆ ಸಿಗಲಿದೆಯೇ ಎಂಬ ಮಾತುಗಳು ಕೇಳಿಬರುತ್ತಿದೆ. 

ಇಂದೇ ಬಿಡುಗಡೆಯಾದರೂ ಅವರನ್ನು ಧಾರವಾಡಕ್ಕೆ ಹೋಗಲು ಅನುಮತಿ ನೀಡುವುದು ಸಂಶಯ ಎಂದು ಹೇಳಲಾಗುತ್ತಿದೆ. ಅಂತೂ ಬಿಡುಗಡೆಯ ಭಾಗ್ಯ ದೊರೆತಿರುವುದು ಅವರ ಮನೆಯವರಿಗೆ ಮತ್ತು ಅಭಿಮಾನಿಗಳಲ್ಲಿ ಸಂತಸವನ್ನುಂಟುಮಾಡಿದೆ.

ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಎಂದು ಜೈಲು ಸೇರಿದ್ದ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ಜಾಮೀನು ನೀಡಿದೆ. ಆದರೆ, ಜಾಮೀನು ಸಿಕ್ಕರೂ ವಿನಯ್ ಕುಲಕರ್ಣಿ ಬಿಡುಗಡೆ ಇಂದು ಬಿಡುಗಡೆಯಾಗುತ್ತಾರೆಯೇ ಇಲ್ಲವೇ ನಾಳೆಯೇ ಎಂಬುದು ಕುತೂಹಲ.

ಬೆಂಬಲಿಗರ ಸಂಭ್ರಮ: ಕಳೆದ ಒಂಭತ್ತೂವರೆ ತಿಂಗಳಿನಿಂದ ವಿನಯ್ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ವಿನಯ ಬಿಡುಗಡೆ ಇಂದು ಎಂದು ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಧಾರವಾಡದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದರು. ಧಾರವಾಡದ ಶಿವಗಿರಿ ಬಡಾವಣೆಯಲ್ಲಿನ ನಿವಾಸದ ಎದುರು ವಿಜಯೋತ್ಸವ ನಡೆಸಲಾಗಿತ್ತು. ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಮತ್ತು ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನದಲ್ಲಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!