ಸಾಂದರ್ಭಿಕ ಚಿತ್ರ 
ರಾಜ್ಯ

ಭೂಮಿಯ ಅಲಭ್ಯತೆಯಿಂದ ಸರ್ಕಾರದ ಗೋಶಾಲೆ ನಿರ್ಮಾಣ ಯೋಜನೆಗೆ ಹಿನ್ನಡೆ

ಗೋಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದ ಕರ್ನಾಟಕ ಸರ್ಕಾರ ಇದೀಗ ಗೋಶಾಲೆಗಳ ನಿರ್ಮಾಣಕ್ಕೆ ಭೂಮಿ ಹುಡುಕಲು ಹರಸಾಹಸ ಪಡುತ್ತಿದೆ. ಹಲವಾರು ಜಿಲ್ಲೆಗಳಲ್ಲಿ ಖಾಲಿ ಇರುವ ಸರ್ಕಾರಿ ಭೂಮಿ ಒಂದೋ ಒತ್ತುವರಿ ಮಾಡಲ್ಪಟ್ಟಿದೆ ಇಲ್ಲವೇ ಇತರೆ ಉದ್ದೇಶಗಳಿಗೆ ಬಳಸಲ್ಪಡುತ್ತಿದೆ. 

ಬೆಂಗಳೂರು: ಈ ಹಿಂದೆ ಗೋಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದ ಕರ್ನಾಟಕ ಸರ್ಕಾರ ಇದೀಗ ಗೋಶಾಲೆಗಳ ನಿರ್ಮಾಣಕ್ಕೆ ಭೂಮಿ ಹುಡುಕಲು ಹರಸಾಹಸ ಪಡುತ್ತಿದೆ. ಹಲವಾರು ಜಿಲ್ಲೆಗಳಲ್ಲಿ ಖಾಲಿ ಇರುವ ಸರ್ಕಾರಿ ಭೂಮಿ ಒಂದೋ ಒತ್ತುವರಿ ಮಾಡಲ್ಪಟ್ಟಿದೆ ಇಲ್ಲವೇ ಇತರೆ ಉದ್ದೇಶಗಳಿಗೆ ಬಳಸಲ್ಪಡುತ್ತಿದೆ. 

ಪ್ರಸ್ತುತ ರಾಜ್ಯದಲ್ಲಿ ಒಟ್ಟು 188 ಗೋಶಾಲೆಗಳಿವೆ. ಅವುಗಳಲ್ಲಿ ಬಹುತೇಕ ಗೋಶಾಲೆಗಳನ್ನು ಧಾರ್ಮಿಕ ಮಠಗಳು ಹಾಗೂ ಎನ್ ಜಿ ಓಗಳು ನಡೆಸುತ್ತಿವೆ. 

ಈ ಹಿಂದೆ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಪಶುಸಂಗೋಪನಾ ಸಚಿವರಾಗಿದ್ದ ಪ್ರಭು ಚೌಹಾಣ್ ಅವರು ಸರ್ಕಾರ ಪ್ರತಿ ತಾಲ್ಲೂಕಿನಲ್ಲಿ ಎರಡು ಗೋಶಾಲೆಗಳನ್ನು ನಿರ್ಮಿಸುವುದಾಗಿ ತಿಳಿಸಿದ್ದರು. ನಂತರದ ದಿನಗಳಲ್ಲಿ ಈ ಸಂಖ್ಯೆ ಜಿಲ್ಲೆಗೆ ಒಂದು ಗೋಶಾಲೆಯಾಗಿ ಇಳಿಕೆಯಾಗಿತ್ತು. ನಂತರ ಜಿಲ್ಲೆಗೊಂದರಂತೆಯೂ ಗೋಶಾಲೆ ನಿರ್ಮಾಣಕ್ಕೆ ಸೂಕ್ತ ಭೂಮಿ ಲಭ್ಯವಾಗದೆ ತನ್ನ ಮಾತನ್ನು ಉಳಿಸಿಕೊಳ್ಳಲಾಗದ ಸ್ಥಿತಿ ಒದಗಿತು. 

ಸಚಿವ ಪ್ರಭು ಚೌಹಾಣ್ 'ಗೋಶಾಲೆಗಳು ಮತ್ತು ಗೋಮಾಳಗಳನ್ನು ನಿರ್ಮಿಸಲು ನಮಗೆ ಕನಿಷ್ಟ 50- 100 ಎಕರೆಗಳಷ್ಟು ಭೂಮಿ ಬೇಕು. 5- 15 ಜಿಲ್ಲೆಗಳಲ್ಲಿ ಭೂಮಿ ಸಿಗಬಹುದಷ್ಟೆ' ಎಂದು ಹೇಳಿದ್ದರು. ಅವೆಲ್ಲದರ ಹೊರತಾಗಿಯೂ ಸರ್ಕಾರ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆಗಳ ನಿರ್ಮಾಣಕ್ಕೆ ಕಂಕಣಬದ್ಧವಾಗಿದೆ ಎಂದರು. ಅವುಗಳಲ್ಲಿ ಹಲವು ಗೋಶಾಲೆಗಳು ಅಕ್ಟೋಬರ್ 2 ಒಳಗಾಗಿ ತೆರೆಯಲಿವೆ ಎನ್ನುವ ವಿಶ್ವಾಸವನ್ನು ಅವರು ವ್ಯಕ್ತ ಪಡಿಸಿದ್ದಾರೆ. ಈ ನಡುವೆ ಕಂದಾಯ ಇಲಾಖೆ ಈ ಉದ್ದೇಶಕ್ಕಾಗಿ ಭೂಮಿ ನೀಡುವ ಆಶಾವಾದ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಂದಾಯ ಇಲಾಖೆ, ಹಲವೆಡೆಗಲಲ್ಲಿ ಇಲಾಖೆ ಧಾರ್ಮಿಕ ಸಂಸ್ಥೆಗಳು, ಮಠಗಳಿಗೆ ಈಗಾಗಲೇ ಭೂಮಿಯನ್ನು ನೀಡಿದ್ದು, ಹಲವು ಬಳಕೆಯಾಗದೆ ಉಳಿದಿವೆ. ಪಶುಸಂಗೋಪನಾ ಇಲಾಖೆಗೆ ನೀಡಲು ಸೂಕ್ತ ಭೂಮಿ ಸಿಗುತ್ತಿಲ್ಲ ಎಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT